ಜಿದ್ದಾ: ಕೆಸಿಎಫ್ ಶರಫಿಯ್ಯಾ ಸೆಕ್ಟರಿನ ಮಾಸಿಕ ಆತ್ಮೀಯ ಮಜ್ಲಿಸ್ ಹಾಗೂ ಹಜ್ಜ್ ವಾಲೇಂಟೀರ್ ಗಳಿಗೆ ಅಭಿನಂದನಾ ಸಮಾರಂಭ ಇಲ್ಲಿಯ ಕೆಸಿಎಫ್ ಭವನದಲ್ಲಿ ಶುಕ್ರವಾರ 27/09/2019 ರಂದು ನಡೆಯಿತು.

ಸಯ್ಯಿದ್ ಝಕರಿಯ್ಯಾ ಸಖಾಫಿ ತಂಙಳ್ ನಾವುಂದ ನೇತೃತ್ವದಲ್ಲಿ ಆತ್ಮೀಯ ಮಜ್ಲಿಸ್ ಹಾಗೂ ದುಆಃ ಕಾರ್ಯಕ್ರಮ ನಡೆಯಿತು. ತದನಂತರ ಕೆಸಿಎಫ್ ಶರಫಿಯ್ಯಾ ಸೆಕ್ಟರ್ ಅಧ್ಯಕ್ಷರಾದ ಜಹಫರ್ ಸಖಾಫಿ ಕರಾಯ ಉಸ್ತಾದರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭೆಯನ್ನು ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಮುಹಮ್ಮದ್ ಹಾಜಿ ಕಲ್ಲರ್ಬೆ ಉದ್ಘಾಟಿಸಿರು.
ಕೆಸಿಎಫ್ ಜಿದ್ದಾ ಝೋನ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಹಾಜಿ ಕಿನ್ಯ ರವರು ಕಾರ್ಯಕ್ರಮಕ್ಕೆ ಶುಭ ಕೋರಿ ಭಾಷಣ ಮಾಡಿದರು.
ಸತತ 4 ವರುಷಗಳಿಂದ ಹಜ್ಜಾಜಿಗಳ ಸೇವೆ ಮಾಡುತ್ತಾ ಟೀಂ ಕ್ಯಾಪ್ಟನ್ ಆಗಿ ಕಾರ್ಯ ನಿರ್ವಹಿಸಿದ್ದ ಸಯ್ಯಿದ್ ಝಕರಿಯ್ಯಾ ಸಖಾಫಿ ತಂಙಳ್ ರವರನ್ನು ಈ ಸಮಾರಂಭದಲ್ಲಿ ಸನ್ಮಾನ ಮಾಡಲಾಯಿತು. ಬಳಿಕ ಸೌದಿ ರಾಷ್ಟ್ರೀಯ ಸಮಿತಿಯಿಂದ ನೀಡಲಾಗುವ ಪ್ರಮಾಣ ಪತ್ರವನ್ನು ಎಲ್ಲಾ ಸ್ವಯಂ ಸೇವಕರಿಗೆ ನೀಡಿ ಅಭಿನಂದಿಸಲಾಯಿತು. ಸ್ವಯಂ ಸೇವಕರಾದ ಅಬ್ಬಾಸ್ ಹಾಜಿ ಕುಕ್ಕಾಜೆ, ಆದಂ ಹಾಜಿ ಗೂಡಿನಬಳಿ, ಹಸನ್ ಜಾಫರ್ ಉಳ್ಳಾಲ, ಸಿರಾಜ್ ಗುಲ್ಬರ್ಗ ರವರು ಮೀನಾದಲ್ಲಿ ಹಜ್ಜಾಜಿಗಳೊಂದಿಗಿನ ಸೇವೆಯ ಅನುಭವನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು.

ಸಭೆಯಲ್ಲಿ ಸಯ್ಯಿದ್ ಅಬ್ದುರಹ್ಮಾನ್ ಅಲ್ ಬುಖಾರಿ ಉಚ್ಚಿಲ ತಂಙಳ್, ಸಯ್ಯಿದ್ ನಾಫೀ ತಂಙಳ್ ನೂಜಿ, ಅಬ್ದುಲ್ ಹಮೀದ್ ಫೈಝಿ ಪುಂಜಾಲಕಟ್ಟೆ, ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಸದಸ್ಯರುಗಳಾದ ಸಲಾಂ ಎಣ್ಮೂರು, ಸಿಧ್ದೀಕ್ ಹಾಜಿ ಬಾಳೆಹೊನ್ನೂರು, ಕೆಸಿಎಫ್ ಜಿದ್ದಾ ಝೋನ್ ನೇತಾರರಾದ ಇಯಾಸ್ ಸಅದಿ ಉಳ್ಳಾಲ, ಸುಲೈಮಾನ್ ಹಾಜಿ ಬಂಡಾಡಿ, ಶಾಹುಲ್ ಹಮೀದ್ ಹಾಜಿ ಸಾಗರ್, ಕೆಸಿಎಫ್ ಬವಾದಿ ಸೆಕ್ಟರ್ ಅಧ್ಯಕ್ಷರಾದ ಮಹ್ರೂಫ್ ಮದನಿ ಸಾಂಬಾರ್ ತೋಟ ,ಶಂಸುದ್ದೀನ್ ಮಡಂತ್ಯಾರ್ ಸೇರಿದಂತೆ ಇತರ ಸುನ್ನೀ ಸ್ಥಾಪನೆಗಳ ನೇತಾರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಾಸೀರುದ್ದೀನ್ ಹೆಚ್ಕಲ್ ರವರು ಸ್ವಾಗತಿಸಿ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ