ಬೆಳ್ತಂಗಡಿ: ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಸಂಘಟಿತ ರೂಪದಲ್ಲಿ ಕಾರ್ಯನಿರ್ವಹಿಸುವ ಉದ್ಧೇಶಕ್ಕೆ ಕಳೆದ ಎಂಟು ತಿಂಗಳ ಹಿಂದೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರ. ಕಾರ್ಯದರ್ಶಿ ಕಾಂತಪುರಂ ಎ.ಪಿ ಉಸ್ತಾದ್ ಘೋಷಣೆ ಮಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಬೆಳ್ತಂಗಡಿ ತಾಲೂಕು ಸಮಿತಿ ಘೋಷಣಾ ಸಮಾವೇಶ ಅಕ್ಟೋಬರ್ 4. ರಂದು ಅಪರಾಹ್ನ 3.00 ಕ್ಕೆ ಬೆಳ್ತಂಗಡಿ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಲಿದೆ.

ಸಮುದಾಯದ ಗಣ್ಯರನ್ನು, ಉಮರಾ ಪ್ರಮುಖರನ್ನು, ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸಮುದಾಯದ ಪರಿಣತ ಮಂದಿಯನ್ನು ಸೇರಿಸಿಕೊಂಡು ಸಮುದಾಯದ ಮೂಲಭೂತ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳವ ಹಾಗೂ ಎಲ್ಲ ಸಮುದಾಯಗಳ ಮಧ್ಯೆ ಪ್ರೀತಿ ವಿಶ್ವಾಸ ಮೂಡಿಸುವ ಮತ್ತು ರಾಜಕೀಯ ರಹಿತವಾಗಿ ದೇಶದ ಅಭಿವೃದ್ಧಿಯಲ್ಲಿ ಪಾತ್ರವಹಿಸುವ ಉದ್ದೇಶಕ್ಕೆ ರೂಪುಗೊಂಡಿರುವ ಮುಸ್ಲಿಂ ಜಮಾಅತ್ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ತನ್ನ ಸಮಿತಿಗಳನ್ನು ರೂಪಿಸಿಕೊಂಡಿದೆ.
ರಾಜ್ಯಮಟ್ಟದ ಸಂಘಟನೆ ಘೋಷಣೆಯಾದ ಬಳಿಕ ಜಿಲ್ಲೆ, ತಾಲ್ಲೂಕು ಮತ್ತು ವಲಯ ಮಟ್ಟಗಳಲ್ಲಿ ಸಂಘಟನೆ ವಿಸ್ತರಣೆಯಾಗುತ್ತಿದ್ದು ಅದರ ಭಾಗವಾಗಿ ಬೆಳ್ತಂಗಡಿಯಲ್ಲೂ ನೂತನ ತಾಲೂಕು ಸಮಿತಿ ಘೋಷಣೆ ಯಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಸಮಿತಿ ಘೋಷಣಾ ಸಮಾವೇಶದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರ. ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ದ.ಕ ಜಿಲ್ಲಾಧ್ಯಕ್ಷ ಏನೆಪೋಯ ಅಬ್ದುಲ್ಲಕುಂಞಿ, ಕಾರ್ಯಾಧ್ಯಕ್ಷ ಎಸ್. ಎಮ್ ರಶೀದ್ ಹಾಜಿ, ಕಾರ್ಯದರ್ಶಿ ಮಮ್ತಾಝ್ ಅಲಿ, ಕೋರ್ಡಿನೇಟರ್ ಡಾ.ಅಬ್ದುರ್ರಶೀದ್ ಝೈನಿ, ಕೋಶಾಧಿಕಾರಿ ಅರಬಿ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ