ಬೆಳ್ತಂಗಡಿ: ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಸಂಘಟಿತ ರೂಪದಲ್ಲಿ ಕಾರ್ಯನಿರ್ವಹಿಸುವ ಉದ್ಧೇಶಕ್ಕೆ ಕಳೆದ ಎಂಟು ತಿಂಗಳ ಹಿಂದೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರ. ಕಾರ್ಯದರ್ಶಿ ಕಾಂತಪುರಂ ಎ.ಪಿ ಉಸ್ತಾದ್ ಘೋಷಣೆ ಮಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಬೆಳ್ತಂಗಡಿ ತಾಲೂಕು ಸಮಿತಿ ಘೋಷಣಾ ಸಮಾವೇಶ ಅಕ್ಟೋಬರ್ 4. ರಂದು ಅಪರಾಹ್ನ 3.00 ಕ್ಕೆ ಬೆಳ್ತಂಗಡಿ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಲಿದೆ.

ಸಮುದಾಯದ ಗಣ್ಯರನ್ನು, ಉಮರಾ ಪ್ರಮುಖರನ್ನು, ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸಮುದಾಯದ ಪರಿಣತ ಮಂದಿಯನ್ನು ಸೇರಿಸಿಕೊಂಡು ಸಮುದಾಯದ ಮೂಲಭೂತ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳವ ಹಾಗೂ ಎಲ್ಲ ಸಮುದಾಯಗಳ ಮಧ್ಯೆ ಪ್ರೀತಿ ವಿಶ್ವಾಸ ಮೂಡಿಸುವ ಮತ್ತು ರಾಜಕೀಯ ರಹಿತವಾಗಿ ದೇಶದ ಅಭಿವೃದ್ಧಿಯಲ್ಲಿ ಪಾತ್ರವಹಿಸುವ ಉದ್ದೇಶಕ್ಕೆ ರೂಪುಗೊಂಡಿರುವ ಮುಸ್ಲಿಂ ಜಮಾಅತ್ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ತನ್ನ ಸಮಿತಿಗಳನ್ನು ರೂಪಿಸಿಕೊಂಡಿದೆ.
ರಾಜ್ಯಮಟ್ಟದ ಸಂಘಟನೆ ಘೋಷಣೆಯಾದ ಬಳಿಕ ಜಿಲ್ಲೆ, ತಾಲ್ಲೂಕು ಮತ್ತು ವಲಯ ಮಟ್ಟಗಳಲ್ಲಿ ಸಂಘಟನೆ ವಿಸ್ತರಣೆಯಾಗುತ್ತಿದ್ದು ಅದರ ಭಾಗವಾಗಿ ಬೆಳ್ತಂಗಡಿಯಲ್ಲೂ ನೂತನ ತಾಲೂಕು ಸಮಿತಿ ಘೋಷಣೆ ಯಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಸಮಿತಿ ಘೋಷಣಾ ಸಮಾವೇಶದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರ. ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ದ.ಕ ಜಿಲ್ಲಾಧ್ಯಕ್ಷ ಏನೆಪೋಯ ಅಬ್ದುಲ್ಲಕುಂಞಿ, ಕಾರ್ಯಾಧ್ಯಕ್ಷ ಎಸ್. ಎಮ್ ರಶೀದ್ ಹಾಜಿ, ಕಾರ್ಯದರ್ಶಿ ಮಮ್ತಾಝ್ ಅಲಿ, ಕೋರ್ಡಿನೇಟರ್ ಡಾ.ಅಬ್ದುರ್ರಶೀದ್ ಝೈನಿ, ಕೋಶಾಧಿಕಾರಿ ಅರಬಿ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ