ರಿಯಾದ್: ಅಪಘತಕ್ಕೀಡಾಗಿ ತುಂಬಾ ತೊಂದರೆಗೆ ಸಿಲುಕಿದ್ದ, ಸೌದಿ ಅರೇಬಿಯಾದ ಖಮೀಸ್ ಮುಶಾಯ್ತ್ ನಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ ಮಹ್ಬೂಬ್ ಪಾಷಾ ಎಂಬವರನ್ನು ಕೆಸಿಎಫ್ ನೆರವಿನಿಂದ ತಾಯಿನಾಡಿಗೆ ಕಳಿಸಲಾಯಿತು.
ತನ್ನ ಸ್ಪೊನ್ಸರ್ ಹುರೂಬ್ ಮಾಡಿ, ಪಾಸಪೋರ್ಟ್, ಇಖಾಮ ಇನ್ನಿತರ ಯಾವುದೇ ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ವಾಸವಾಗಿದ್ದ ಇವರು ಸೈಕಲ್ನಲ್ಲಿ ಸಮೋಸ ಮಾರಿ ದೊರೆಯುತ್ತಿದ್ದ ಹಣದಿಂದ ಜೀವನ ನಡೆಸುತ್ತಿದ್ದರು.ಆದರೆ ದುರ್ವಿಧಿ ಎಂಬಂತೆ ಅವರ ಸೈಕಲ್ಗೆ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಅವರಿಗೆ ಸಹಾಯಕ್ಕಾಗಿ ಯಾವುದೇ ಬಂದು ಮಿತ್ರರಿಲ್ಲದೆ ಏಕಾಂಗಿಯಾಗಿ ಸಂಕಷ್ಟದಲ್ಲಿದ್ದರು.
ಅತ್ತ ಕೆಲಸ ಮಾಡಲಾಗದೆ ಇತ್ತ ಊರಿಗೂ ಹೋಗಲಾರದೆ ಮಾನಸಿಕವಾಗಿ ನೊಂದು ಆಸ್ಪತ್ರೆಯಲ್ಲಿದ್ದ ಅವರನ್ನು ಭೇಟಿಯಾದ ಕೆಸಿಎಫ್ ಖಮೀಸ್ ಮುಶಾಯ್ತ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಅವರು ಭಾರತೀಯ ರಾಯಭಾರ ಕಛೇರಿ ಹಾಗೂ ಸೌದಿ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ಅವರಿಗೆ ಊರಿಗೆ ಹೋಗಲು ಅಗತ್ಯವಿದ್ದ ತಾತ್ಕಾಲಿಕ ಪಾಸ್ಪೋರ್ಟ್ ಸಹಿತ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಟಿಕೆಟ್ ವ್ಯವಸ್ಥೆಯನ್ನು ಕೂಡ ಮಾಡಿ ಅವರನ್ನು ಅಬಹ ಏರ್ಪೋರ್ಟ್ ತಲುಪಿಸಿ ಸುರಕ್ಷಿತವಾಗಿ ಯಾವುದೇ ಅಡೆತಡೆಗಳಿಲ್ಲದೆ ಊರಿಗೆ ತಲುಪುವಂತೆ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ