ರಿಯಾದ್: ಅಪಘತಕ್ಕೀಡಾಗಿ ತುಂಬಾ ತೊಂದರೆಗೆ ಸಿಲುಕಿದ್ದ, ಸೌದಿ ಅರೇಬಿಯಾದ ಖಮೀಸ್ ಮುಶಾಯ್ತ್ ನಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ ಮಹ್ಬೂಬ್ ಪಾಷಾ ಎಂಬವರನ್ನು ಕೆಸಿಎಫ್ ನೆರವಿನಿಂದ ತಾಯಿನಾಡಿಗೆ ಕಳಿಸಲಾಯಿತು.
ತನ್ನ ಸ್ಪೊನ್ಸರ್ ಹುರೂಬ್ ಮಾಡಿ, ಪಾಸಪೋರ್ಟ್, ಇಖಾಮ ಇನ್ನಿತರ ಯಾವುದೇ ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ವಾಸವಾಗಿದ್ದ ಇವರು ಸೈಕಲ್ನಲ್ಲಿ ಸಮೋಸ ಮಾರಿ ದೊರೆಯುತ್ತಿದ್ದ ಹಣದಿಂದ ಜೀವನ ನಡೆಸುತ್ತಿದ್ದರು.ಆದರೆ ದುರ್ವಿಧಿ ಎಂಬಂತೆ ಅವರ ಸೈಕಲ್ಗೆ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಅವರಿಗೆ ಸಹಾಯಕ್ಕಾಗಿ ಯಾವುದೇ ಬಂದು ಮಿತ್ರರಿಲ್ಲದೆ ಏಕಾಂಗಿಯಾಗಿ ಸಂಕಷ್ಟದಲ್ಲಿದ್ದರು.
ಅತ್ತ ಕೆಲಸ ಮಾಡಲಾಗದೆ ಇತ್ತ ಊರಿಗೂ ಹೋಗಲಾರದೆ ಮಾನಸಿಕವಾಗಿ ನೊಂದು ಆಸ್ಪತ್ರೆಯಲ್ಲಿದ್ದ ಅವರನ್ನು ಭೇಟಿಯಾದ ಕೆಸಿಎಫ್ ಖಮೀಸ್ ಮುಶಾಯ್ತ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಅವರು ಭಾರತೀಯ ರಾಯಭಾರ ಕಛೇರಿ ಹಾಗೂ ಸೌದಿ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ಅವರಿಗೆ ಊರಿಗೆ ಹೋಗಲು ಅಗತ್ಯವಿದ್ದ ತಾತ್ಕಾಲಿಕ ಪಾಸ್ಪೋರ್ಟ್ ಸಹಿತ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಟಿಕೆಟ್ ವ್ಯವಸ್ಥೆಯನ್ನು ಕೂಡ ಮಾಡಿ ಅವರನ್ನು ಅಬಹ ಏರ್ಪೋರ್ಟ್ ತಲುಪಿಸಿ ಸುರಕ್ಷಿತವಾಗಿ ಯಾವುದೇ ಅಡೆತಡೆಗಳಿಲ್ಲದೆ ಊರಿಗೆ ತಲುಪುವಂತೆ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ