ಅಲ್ ಹಸ್ಸಾ: ಸೌದಿ ಅರೇಬಿಯಾದ ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿಯ ನಾಯಕತ್ವದಲ್ಲಿ ಸೌದಿ ಯಾದ್ಯಂತ ಕೆ.ಸಿ.ಎಫ್ ನ ವಿವಿಧ ಸೆಂಟರ್ ಗಳಲ್ಲಿ ಅಸ್ಸುಫ್ಪಾ ತರಗತಿ 4 ನೇ ಹಂತದ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಇದರ ಭಾಗವಾಗಿ ಕೆ.ಸಿ.ಎಫ್ ಅಲ್ ಹಸ್ಸಾ ಸೆಕ್ಟರ್ ನಲ್ಲಿ ಅಸ್ಸುಫ್ಪಾ ತರಗತಿಯು ಯಶಸ್ವಿಯಾಗಿ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಸೆಕ್ಟರ್ ಅಧ್ಯಕ್ಷರಾದ ಹಬೀಬ್ ಮರ್ದಾಳ ರವರು ಅಧ್ಯಕ್ಷತೆಯನ್ನು ವಹಿಸಿದರು. ಕೆ.ಸಿ.ಎಫ್ ದಮ್ಮಾಮ್ ಝೋನ್ ಉಸ್ತಾದ್ ಉಮರುಲ್ ಫಾರೂಕ್ ಬಾ ಅಹ್ಸನಿ ಕೆ.ಸಿ.ಎಫ್ ಸಂಘಟನೆಯು ಪ್ರವಾಸಿ ಸ್ನೇಹಿತರ ಒಳಿತಿಗಾಗಿ, ಹಾಗೂ ಪರಲೋಕದ ವಿಜಯಕ್ಕಾಗಿ ಅಸ್ಸುಫ್ಪಾ ತರಗತಿ ಎಂಬ ಮಹತ್ತರವಾದ ಪದ್ದತಿಯನ್ನು ನಮಗೆ ಪರಿಚಯಿಸಿ ಕೊಟ್ಟಿದೆ, ಅದನ್ನು ಸರ್ವ ಪ್ರವಾಸಿ ಕಾರ್ಯಕರ್ತರು ಸದುಪಯೋಗ ಪಡೆದು ಕೊಳ್ಳಬೇಕೆಂದು ಕರೆ ನೀಡಿ ಅಸ್ಸುಫ್ಪಾ ತರಗತಿಯನ್ನು ಔಪಚಾರಿಕವಾಗಿ ಉದ್ಘಾಟಿಸಿ ಮಾತನಾಡಿದರು.
ಬಳಿಕ ತರಗತಿಗೆ ಹಾಜರಾದ ವಿಧ್ಯಾರ್ಥಿಗಳಿಗೆ ಕೆ.ಸಿ.ಎಫ್. ಅಲ್ ಹಸ್ಸಾ ಸೆಕ್ಟರ್ ಟ್ಯೂಟರಾದ ಇಬ್ರಾಹಿಂ ಸ ಅದಿ ಮಚ್ಚಂಪಾಡಿ ಯವರು ತನ್ನ ಅತ್ಯದ್ಭುತವಾದ ಶೈಲಿಯ ಮೂಲಕ ಕುರ್ ಅನಿನ ತಜ್ವೀದ್ ನಿಯಮಗಳ ತರಗತಿಯನ್ನು ನಡೆಸಿ ವಿಧ್ಯಾರ್ಥಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾದರು.
ತರಗತಿಗೆ ಹಾಜರಾದ ವಿದ್ಯಾರ್ಥಿಗಳು ಅಸ್ಸುಫ್ಪಾ ಶಿಕ್ಷಣ ಪದ್ದತಿಯನ್ನು ಪ್ರವಾಸಿ ರಂಗದಲ್ಲಿ ಜಾರಿಗೆ ತಂದ ಕೆ.ಸಿ.ಎಫ್ ಸಂಘಟನೆಗೆ ಕೃತಜ್ಞತೆ ಸಲ್ಲಿಸುವ ಮೂಲಕ ತನ್ನ ಸಂತೋಷವನ್ನು ವ್ಯಕ್ತ ಪಡಿಸಿದರು.
ವರದಿ : ಅಶ್ರಫ್ ಕಟ್ಟದಪಡ್ಪು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ