ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆ.ಸಿ.ಎಫ್ ಬಹರೈನ್ ಇದರ ವತಿಯಿಂದ ” ಹಬೀಬ್ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮ್ ನಮ್ಮ ಜೊತೆ” ಎಂಬ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಮೀಲಾದ್ ಕಾನ್ಫರೆನ್ಸ್ ನವೆಂಬರ್ ಒಂದರಂದು ಶುಕ್ರವಾರ 7:30ಕ್ಕೆ ಪಾಕಿಸ್ತಾನ ಕ್ಲಬ್ ಮನಾಮದಲ್ಲಿ ನಡೆಯಲಿದೆ.
ಈ ಐತಿಹಾಸಿಕ ಬೃಹತ್ ಸಮ್ಮೇಳನದಲ್ಲಿ ಸಯ್ಯಿದ್ ಕುಟುಂಬದ ಅಗ್ರಗಣ್ಯ ನೇತಾರರಾದ ಅಸಯ್ಯದ್ ಅಲಿ ಬಾಫಖಿ ತಂಙಳ್ ದುಃಆ ಆಶೀರ್ವಚನ ನೀಡಲಿದ್ದಾರೆ. ಹಾಗೂ ಅವರ ಮೊಮ್ಮಗ ಸಯ್ಯಿದ್ ನಿಝಾಮುದ್ದೀನ್ ಬಾಫಖಿ ತಂಙಳ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ. ಬಹುಭಾಷಾ ಪಂಡಿತ,ಖ್ಯಾತ ವಾಗ್ಮಿ ಪ್ರಭಾಷಣ ಲೋಕದ ನಕ್ಷತ್ರ ತಾರೆ ನೌಫಲ್ ಸಖಾಫಿ ಕಳಸ ಉಸ್ತಾದ್ ರವರ ಪ್ರಡೋಜ್ವಲ ಭಾಷಣ ನಡೆಯಲಿದೆ.
ಹಲವಾರು ಸಾದಾತ್ ಗಳು, ಉಲಮಾ ಉಮಾರಾ ನಾಯಕರು, ಗಣ್ಯಾತಿ ಗಣ್ಯ ವ್ಯಕ್ತಿಗಳು ಹಾಗೂ ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳ ನೇತಾರರು ಪಾಲ್ಗೊಳ್ಳುವ
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೆ.ಸಿ.ಎಫ್ ಬಹರೈನ್ ಮೀಲಾದ್ ಸ್ವಾಗತ ಸಮಿತಿ ಚೇರ್ಮ್ಯಾನ್ ಬಷೀರ್ ಕಾರ್ಲೆ ಹಾಗೂ , ಕನ್ವೀನರ್ ಸಯ್ಯದ್ ಇರ್ದೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕೆಸಿಎಫ್ ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷರಾದ ಅಲಿ ಮುಸ್ಲಿಯಾರ್,ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಟಲ್, ಪ್ರಧಾನ ಕಾರ್ಯದರ್ಶಿ ಹಾರೀಸ್ ಸಂಪ್ಯ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಹಾಗೂ ಸಾಂತ್ವನ ವಿಭಾಗದ ಚೆಯರ್ಮೆನ್ ಕರೀಂ ಉಚ್ಚಿಲ,ಕನ್ವೀನರ್ ಹನೀಫ್ ಜಿ ಕೆ ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಭಾಗದ ಚಯರ್ಮೆನ್ ಲತೀಫ್ ಪೆರೋಲಿ, ಕಾರ್ಯದರ್ಶಿ ತೌಫೀಕ್ ಉಮ್ಮರ್ ರವರು, ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ