ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ದುಬೈ ಸಮಿತಿ ವತಿಯಿಂದ ಹಬೀಬ್ ನಮ್ಮ ಜತೆಗಿರಲಿ ಎಂಬ ಶೀರ್ಷಿಕೆಯಲ್ಲಿ ನವಂಬರ್ 22 ರಂದು ದುಬೈ ದೇರಾ ಸಿಟಿ ಸೆಂಟರ್ ಸಮೀಪದ ಪರ್ಲ್ ಸಿಟಿ ಸೂಟ್ ಹೋಟೆಲ್ ಸಂಭಾಂಗಣದಲ್ಲಿ ಬೃಹತ್ ಮೀಲಾದ್ ಕಾರ್ಯಕ್ರಮ ನಡೆಯಲಿದೆ.

ಈ ಪ್ರಯುಕ್ತ ಅನಿವಾಸಿ ಕನ್ನಡಿಗರಿಗೆ ಹಾಗೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದೇ ಬರುವ ಶುಕ್ರವಾರ ದಿನಾಂಕ 01/11/2019 ರಂದು ಬೆಳಗ್ಗೆ 9ರಿಂದ ಸಂಜೆ 5 ರ ತನಕ ದೇರಾ ಸಿಟಿ ಸೆಂಟರ್ ಹತ್ತಿರವಿರುವ ಪರ್ಲ್ ಸಿಟಿ ಸೂಟ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.
ಖಿರಾಅತ್, ಕನ್ನಡ ಇಂಗ್ಲಿಷ್ ಮಲಯಾಳಂ ಭಾಷೆಗಳಲ್ಲಿ ಭಾಷಣಗಳು, ಪದ್ಯ, ಮಾಪಿಳಪ್ಪಾಟ್, ಅರೇಬಿಕ್ ಹಾಡು, ಕವನ ರಚನೆ, ಕ್ವಿಝ್ ಮುಂತಾದ ವಿಷಯಗಳಲ್ಲಿ ಮಕ್ಕಳು, ವಿದ್ಯಾರ್ಥಿಗಳು ಹಾಗು ಸಾಮಾನ್ಯ ಎಂಬ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾದ ಪ್ರಥಮ, ದ್ವಿತೀಯ, ಬಹುಮಾನ ಹಾಗೂ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರೋತ್ಸಾಹ ಬಹುಮಾನವನ್ನು ನೀಡಲಾಗುವುದು. ಸ್ತ್ರೀಯರಿಗಾಗಿ ವಿಶೇಷ ಪ್ರಭಂದ ಸ್ಪರ್ಧೆ ನಡೆಯಲಿದೆ.
ದುಬೈಯಾದ್ಯಂತ ದೇರಾ, ಹೋರ್ ಅಲ್ ಅನ್ಝ್ ಮತ್ತು ಅಲ್ ಕಿಸೈಸ್ ಭಾಗದಲ್ಲಿ ವಾಸವಿರುವ ಎಲ್ಲಾ ಅನಿವಾಸಿ ಕನ್ನಡಿಗರಾದ ಪ್ರತಿಭೆಗಳು ವಿಶೇಷವಾಗಿ ಫ್ಯಾಮಿಲಿಗಳು ಇದರ ಸದುಪಯೋಗ ಪಡೆಯಬೇಕಾಗಿ ಕೆಸಿಎಫ್ ದುಬೈ ನಾರ್ತ್ ಪ್ರತಿಭೋತ್ಸವ ಸಮಿತಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ ಹಾಗೂ ಜನರಲ್ ಕನ್ವೀನರ್ ಕಲಂದರ್ ಕಬಕ ರವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
055- 9565153
050-3139568















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ