ತಬೂಕ್: ಕರ್ನಾಟಕದ ಅನಿವಾಸಿ ಸಂಘಟನಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ತಬೂಖ್ ಸೆಕ್ಟರ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ತಬೂಖ್ ಕೆ.ಸಿ.ಎಪ್ ಭವನದಲ್ಲಿ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಅಬ್ದುರ್ರಮಾನ್ ಭದ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ತಬೂಖ್ ಸೆಕ್ಟರ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಕರಾಯ. ರಾಜ್ಯೋತ್ಸವ ಸಂದೇಶ ನೀಡಿದರು ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಪೋಸ್ಟರ್ ಪ್ರದರ್ಶನ ಮಾಡಿ ಕೊನೆಯಲ್ಲಿ ಭಾವಹಿಸಿದ ಕಾರ್ಯಕರ್ತರಿಗೆ ಸಿಹಿ ವಿತರಿಸಲಾಯಿತು.






