ದುಬೈ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ “ಸಂದೇಶ ವಾಹಕರೇ ತಮಗೆ ಸಮರ್ಪಣೆ” ಎಂಬ ಶೀರ್ಷಿಕೆಯಲ್ಲಿ ಬೃಹತ್ ಮೀಲಾದ್ ಸಮಾವೇಶ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೋಟೆಲ್ ನಲ್ಲಿ ನವೆಂಬರ್ 8 ರಂದು ಶುಕ್ರವಾರ ಸಂಜೆ 6 ಘಂಟೆಗೆ ನಡೆಯಲಿದೆ. ಪ್ರಮುಖ ಆತ್ಮೀಯ ಸುಪೀವರ್ಯರೂ, ಶಿಕ್ಷಣ ತಜ್ಞರೂ ಆದ ಬದ್ರುಸ್ಸಾದಾತ್ ಸಯ್ಯದ್ ಖಲೀಲುಲ್ ಬುಖಾರಿ ತಂಙ್ಞಳ್ (ಪ್ರಧಾನ ಕಾರ್ಯದರ್ಶಿ, ಕೇರಳ ಮುಸ್ಲಿಂ ಜಮಾಅತ್) ರವರು ದುಆ ನೇತೃತ್ವವನ್ನು ನೀಡಲಿದ್ದಾರೆ.
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯುಎಇ ಸಮಿತಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ರವರು ಉದ್ಘಾಟಿಸಲಿದ್ದಾರೆ. ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ನಾಯಕರಾದ ಅಲಿ ಮುಸ್ಲಿಯಾರ್ ಬಹರೈನ್, ಪ್ರಮುಖ ಸಮಾಜ ಸೇವಕರೂ ಮೂರ್ನಾಡು ಮುಸ್ಲಿಂ ಜಮಾಅತ್ ಅಧ್ಯಕ್ಷರೂ ಆದ ಮಜೀದ್ ಮೂರ್ನಾಡು, ಕೊಡಗು ಪ್ರಳಯಕ್ಕೆ ಮನಮಿಡಿದು ನಿರಾಶ್ರಿತರಿಗೆ ಸೂರಿಗಾಗಿ ಸ್ಥಳಧಾನ ಮಾಡಿ ಸ್ಪಂದಿಸಿದ ಹಾಜಿ ಅಬ್ದುಲ್ಲಾ ಕೊಂಡಂಗೇರಿ, ಕೆಸಿಎಫ್ ಯುಎಇ ಅಧ್ಯಕ್ಷರಾದ ಜಲೀಲ್ ನಿಝಾಮಿ ಎಮ್ಮೆಮಾಡು, ಕೊಡಗು ಸುನ್ನಿ ವೆಲ್ಫೇರ್ ಗಲ್ಫ್ ಸಮಿತಿ ಅಧ್ಯಕ್ಷರಾದ ಉಸ್ಮಾನ್ ಹಾಜಿ ನಾಪೋಕ್ಲು ಸೇರಿದಂತೆ ಹಲವಾರು ಉಲಮಾ ಉಮರಾ ನಾಯಕರುಗಳು, ಯುಎಇಯ ಪ್ರಮುಖ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ದುಬೈನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಪಧಾಧಿಕಾರಿಗಳು ಕಾರ್ಯಕ್ರಮದಲ್ಲಿ ಕೊಡಗಿನ 400ರಷ್ಟು ಜನರು ಪಾಲ್ಗೊಳ್ಳಲಿದ್ದು, ಹುಬ್ಬುರ್ರಸೂಲ್ ಭಾಷಣ, ಪ್ರಾರ್ಥನಾ ಸಂಗಮ, ಅಭಿನಂದನಾ ಸಮಾರಂಭ, ಮೌಲೂದ್ ಪಾರಾಯಣ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಡನ್ ದಫ್ಫ್ ಪ್ರದರ್ಶನ, ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳು ನಡೆಯಲಿದ್ದು ಯುಎಇ ಯಲ್ಲಿರುವ ಎಲ್ಲಾ ಅನಿವಾಸಿಗಳು ಭಾಗವಹಿಸಿ ಸಹಕರಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದವರು
- ಅಬೂಬಕರ್ ಹಾಜಿ ಕೊಟ್ಟಮುಡಿ (ಅಧ್ಯಕ್ಷರು KSWA ಯುಎಇ ಸಮಿತಿ)
- ಅಹಮದ್ ಚಾಮಿಯಾಲ್ (ಛೇರ್ಮನ್ ಮೀಲಾದ್ ಸ್ವಾಗತ ಸಮಿತಿ)
- ಅರಾಫತ್ ನಾಪೋಕ್ಲು (ಫೈನಾನ್ಸ್ ಹೆಡ್, ಮೀಲಾದ್ ಸ್ವಾಗತ ಸಮಿತಿ)
- ಇಸ್ಮಾಯಿಲ್ ಮೂರ್ನಾಡು (ಪ್ರಧಾನ ಕಾರ್ಯದರ್ಶಿ, KSWA ಯುಎಇ ಸಮಿತಿ)
- ರಿಯಾಝ್ ಕೊಂಡಂಗೇರಿ (ಕನ್ವೀನರ್, ಮೀಲಾದ್ ಸ್ವಾಗತ ಸಮಿತಿ
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ