ಹೊಸದೆಹಲಿ: ಅಯೋಧ್ಯೆಯ ರಾಮ ಮಂದಿರ ಹಾಗೂ ಬಾಬರಿ ಮಸೀದಿ ಜಮೀನಿನ ಒಡೆತನದ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಎಲ್ಲ ಮುಸ್ಲಿಮರೂ ಗೌರವಿಸುತ್ತಾರೆ, ಮರುಪರಿಶೀಲನೆಗೆ ಅರ್ಜಿ ಹಾಕುವುದಿಲ್ಲ ಎಂದು ಈ ವ್ಯಾಜ್ಯದಲ್ಲಿ ಬಾಬರಿ ಮಸೀದಿ ಪರ ವಾದಿಗಳಾದ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ತೀರ್ಪು ಪ್ರಕಟವಾಗುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, 40 ದಿನಗಳ ಸತತ ವಿಚಾರಣೆಯ ಬಳಿಕ ಈಗ ಈ ವಿವಾದಕ್ಕೆ ಪರಿಹಾರ ದೊರೆಯುತ್ತಿರುವುದು ಸ್ವಾಗತಾರ್ಹ. ಏನೇ ತೀರ್ಪು ಬಂದರೂ ಅದನ್ನು ಒಪ್ಪುತ್ತೇವೆ. ದೇಶದ ಮುಸಲ್ಮಾನರು ಈ ನೆಲದ ಕಾನೂನನ್ನು ಗೌರವಿಸುತ್ತಾರೆ ಎಂದಿದ್ದಾರಲ್ಲದೆ, ತೀರ್ಪು ಮರುಪರಿಶೀಲನೆಗೆ ಅರ್ಜಿ ಹಾಕುವುದಿಲ್ಲ ಎಂದಿದ್ದಾರೆ.
ಇದೇ ವೇಳೆ, ತೀರ್ಪು ಬಂದ ತಕ್ಷಣ ಪ್ರತಿಕ್ರಿಯಿಸಿರುವ ಅವರು, ಸಂತಸ ವ್ಯಕ್ತಪಡಿಸಿದ್ದು, ಕೋರ್ಟ್ ತೀರ್ಪನ್ನು ಗೌರವಿಸುವುದಾಗಿ ಹೇಳಿದ್ದಾರೆ.
70 ವರ್ಷಗಳಿಂದ ನಡೆಯುತ್ತಿರುವ ವಿವಾದಕ್ಕೆ ಈಗ ಪರಿಹಾರ ದೊರೆಯುತ್ತಿದೆ. ಇದು ತುಂಬಾ ಒಳ್ಳೆಯ ಸಂಗತಿ. ಇಡೀ ಹಿಂದೂಸ್ತಾನವೇ ಇದಕ್ಕೆ ಪರಿಹಾರವನ್ನು ನಿರೀಕ್ಷಿಸುತ್ತಿದೆ. ಈ ಕಾನೂನು ಹೋರಾಟ ಆರಂಭಿಸಿದವರಲ್ಲಿ ಕೆಲವರು ಈಗಿಲ್ಲ, ಕೆಲವರು ಮಾತ್ರ ಇದ್ದಾರೆ ಎಂದು ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ