ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುಧಾಬಿ ಝೋನ್ ವತಿಯಿಂದ ಜಿ.ಸಿ.ಸಿ.ಯಲ್ಲಿಯೇ ಅತೀ ದೊಡ್ಡ ಬ್ರಹತ್ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಡಗರದಿಂದ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣ ಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ತನ್ನ ವಾಕ್ ಚಾತುರ್ಯದ ಮೂಲಕ ಜನ ಮನ ಗೆದ್ದ ,ಯುವಕರ ಆವೇಶ ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ.
ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದು ತಾವೆಲ್ಲರೂ ಸಂಜೆ 5 ಘಂಟೆಯಿಂದ ನಡೆಯುವ ಕಾರ್ಯಕ್ರಮ ತಮ್ಮ ಕುಟುಂಬ, ಸ್ನೇಹಿತ ಬಳಗ ಸಮೇತ ಹಾಜರಾಗಿ ಸಹಕರಿಸಬೇಕೆಂದು ಕೆಳಿಕೊಳ್ಳುತ್ತೇವೆ.ಕಾರ್ಯ ಕ್ರಮದಲ್ಲಿ ಸ್ತ್ರೀಯರಿಗೆ ಪ್ರತ್ಯೇಕ ಸ್ಥಳ ಸೌಕರ್ಯ ಕಲ್ಪಿಸಲಾಗಿದೆ.
ಅಬ್ದುಲ್ ಹಕೀಮ್ ತುರ್ಕಳಿಕೆ
(ಜನರಲ್ ಕನ್ವೀನರ್
ಗ್ರಾಂಡ್ ಮೀಲಾದ್ ಸಮಾವೇಶ ಸ್ವಾಗತ ಸಮಿತಿ)
ಕೆ ಸಿ ಎಫ್ ಅಬುಧಾಬಿ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ