ನವದೆಹಲಿ,ನ.17: ಸರ್ಕಾರಿ ಸ್ವಾಮ್ಯದ ವಿಮಾನ ಯಾನ ಸಂಸ್ಥೆ ‘ಏರ್ ಇಂಡಿಯಾ’ ಹಾಗೂ ತೈಲ ಸಂಸ್ಥೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್)’ ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮಾತುಕತೆಯನ್ನು ಅಂತಿಮಗೊಳಿಸಲು ಸರ್ಕಾರ ಸಂಕಲ್ಪಿಸಿದ್ದು, ಬರುವ ಮಾಚ್ ಒಳಗೆ ಈ ಪ್ರಕ್ರಿಯೆ ಮುಗಿಯಲಿದೆ ಎಂದು ಆರ್ಥ ಸಚಿವರಾದ ನಿರ್ಮಲಾ ಸೀತಾರಾಮನ್ ನಿನ್ನೆ ತಿಳಿಸಿದ್ದಾರೆ.
‘ಈ ವರ್ಷಾಂತ್ಯದೊಳಗೆ ಈ ಎರಡೂ ಸಂಸ್ಥೆಗಳ ಮಾರಾಟ ಪ್ರಕ್ರಿಯೆ ಮುಗಿಯುವುದೆಂಬ ನಿರೀಕ್ಷೆ ನಮ್ಮದಾಗಿದೆ. ಆದರೆ ಏನಾಗುವುದೆಂಬುದನ್ನು ವಾಸ್ತವಾಂಶಗಳು ನಿರ್ಧರಿಸುತ್ತವೆ’ ಎಂದು ಸಂದರ್ಶನವೊಂದರಲ್ಲಿ ಅವರು ಸುಳಿವು ನೀಡಿದ್ದಾರೆ. ಈ ಹಣಕಾಸು ವರ್ಷಾಂತ್ಯಕ್ಕೆ ದೇಶದ ಆರ್ಥಿಕತೆಯನ್ನು 1 ಲಕ್ಷ ಕೋಟಿ ರೂ.ಗೆ ಏರಿಸಬೇಕೆಂಬ ಸರ್ಕಾರದ ಮಹತ್ವಾಕಾಂಕ್ಷೆಯ ಭಾಗವಾಗಿ ಈ ಎರಡೂ ಮಹತ್ವದ ಸಂಸ್ಥೆಗಳನ್ನು ಮಾರಾಟ ಮಾಡುವ ಕಾರ್ಯತಂತ್ರದ ಕುರಿತು ಅವರು ಉಲ್ಲೇಖಿಸಿದರು.
ಏರ್ ಇಂಡಿಯಾ ಸಂಸ್ಥೆಯನ್ನು ಖರೀದಿಸುವ ಕುರಿತು ಅಂತಾರಾಷ್ಟ್ರೀಯ ಪ್ರದರ್ಶನಗಳಲ್ಲಿ ಹೂಡಿಕೆದಾರರು ತೀವ್ರ ಆಸಕ್ತಿ ಹೊಂದಿರುವ ಕುರಿತು ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಆದರೆ ಒಂದು ವರ್ಷದ ಹಿಂದೆ ನಷ್ಟದಲ್ಲಿದ್ದ ಏರ್ ಇಂಡಿಯಾವನ್ನು ಮಾರಾಟಕ್ಕಿಟ್ಟಿದ್ದಾಗ ಹೂಡಿಕೆದಾರರ ಪ್ರತಿಕ್ರಿಯೆ ನೀರಸವಾಗಿದ್ದ ಕಾರಣ ಮಾರಾಟ ಪ್ರಕ್ರಿಯೆಯನ್ನು ಹಿಂದೆಗೆದುಕೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.
ಆರ್ಥಿಕ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಸಕಾಲಿಕವಾಗಿ ಕೈಗೊಂಡ ಕೆಲವು ಕ್ರಮಗಳಿಂದಾಗಿ ಕೆಲವು ವಲಯಗಳು ಇದೀಗ ಚೇತರಿಸಿಕೊಂಡಿವೆ; ಕೈಗಾರಿಕೋದ್ಯಮಗಳ ಮಾಲೀಕರು ಇದೀಗ ತಮ್ಮ ವಾರ್ಷಿಕ ವಹಿವಾಟು ಬೆಳವಣಿಗೆ ಮಾಡಿಕೊಂಡಿದ್ದಾರೆ; ಅವರಲ್ಲಿ ಅನೇಕರು ಹೊಸದಾಗಿ ಬಂಡವಾಳ ಹೂಡಿಕೆಗೂ ಚಿಂತಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೊಂಡರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ