ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ದುಬೈ ನಾರ್ತ್ ಝೋನ್ ಆಶ್ರಯದಲ್ಲಿ “ಹಬೀಬ್ ﷺ ನಮ್ಮ ಜತೆಗಿರಲಿ” ಎಂಬ ಶೀರ್ಷಿಕೆಯಲ್ಲಿ ಬೃಹತ್ ಮೀಲಾದ್ ಸಮಾವೇಶ ನವೆಂಬರ್ 22 ರಂದು ಸಂಜೆ 5. 30ಕ್ಕೆ ದುಬೈ ದೇರಾ ಸಿಟಿ ಸೆಂಟರ್ ಹತ್ತಿರವಿರುವ ಪರ್ಲ್ ಸಿಟಿ ಸೂಟ್ ಹೋಟೆಲ್ ಸಂಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಖುರ್ರತ್ತುಸ್ಸಾದಾತ್ ಸಯ್ಯದ್ ಪಝಲ್ ಕೋಯಮ್ಮ ತಂಙ್ಞಳ್ ಕೂರತ್ ದುಆ ನೇತೃತ್ವವನ್ನು ನೀಡಲಿದ್ದು, ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷ ಇಬ್ರಾಹಿಂ ಮದನಿ ಸಾಮಣಿಗೆ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಖ್ಯಾತ ವಾಗ್ಮಿಯೂ, ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಕಾರ್ಯದರ್ಶಿ ಮೌಲನಾ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಭಾಷಣ ಮಾಡಲಿದ್ದಾರೆ.
ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಜಿ ಶೈಖ್ ಬಾವಾ ಮಂಗಳೂರು ಸಮಾರಂಭವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಹಣಕಾಸು ವ್ಯವಸ್ಥಾಪಕರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ, ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು ಭಾಗವಹಿಸಲಿದ್ದಾರೆ.
ಡಾ. ರಫೀಕ್ ಅಹ್ಮದ್ (ಮಾಜೀ ಶಾಸಕರು ಹಾಗೂ ಡೈರೆಕ್ಟರ್ HMS Institute of technology, ತುಮಕೂರು), ಜನಾಬ್ ನಾಗೂರ್ ಅಬ್ದುಲ್ ಸಮದ್ (ಶಾರ್ಜಾ), ಜನಾಬ್ ನಝೀರ್ ಎಂ (HMS Institute of technology, ತುಮಕೂರು), ಸಯ್ಯದ್ ಶೈಖ್ ಮಖ್ದೂಂ (ಮೇನೇಜಿಂಗ್ ಡೈರೆಕ್ಟರ್, ರಾಯಲ್ ಡಿಲೈಟ್ ಈವೆಂಟ್ಸ್, ದುಬೈ), ಜನಾಬ್ ಇಕ್ಬಾಲ್ ಸಿದ್ದಕಟ್ಟೆ (ಮೇನೇಜಿಂಗ್ ಡೈರೆಕ್ಟರ್, ಅಲ್ ರಾಬಿಅ ಜನರಲ್ ಮೈನ್’ಟನೆನ್ಸ್, ದುಬೈ), ಶೈಖ್ ಅಲಿ ದಾರ್ವಿಶ್ ಹಸನ್ ಅಲ್ ಮಕ್ಕಿ (ದುಬೈ) , ಶೈಖ್ ಮಹ್ಮೂದ್ ಹುಸೈನ್ ಇಬ್ರಾಹಿಂ (ದುಬೈ), ಶೈಖ್ ಇಬ್ರಾಹಿಂ ದಾರ್ವಿಶ್ ಹಸನ್ ಅಲ್ ಮಕ್ಕಿ (ದುಬೈ), ಜನಾಬ್ ಅನ್ವರ್ ನೆಲ್ಲಿಕುನ್ನ್, ಜನಾಬ್ ರಶೀದ್ ಕೈಕಂಬ ಸೇರಿದಂತೆ ದುಬೈಯಲ್ಲಿರುವ ಪ್ರಮುಖ ಉದ್ಯಮಿಗಳು, ಸಾಮಾಜಿಕ ಸಾಂಸ್ಕೃತಿಕ ಕ್ಷೇತ್ರದ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.
ಖ್ಯಾತ ಗಾಯಕರಾದ ಹಾಫಿಝ್ ಶಿಹಾಬುದ್ದೀನ್ ಬಾಖವಿ ಕಾವುಂಪಡಿ ನೇತೃತ್ವದಲ್ಲಿ ಬುರ್ದಾ ಆಲಾಪನೆ, ಮೌಲೂದ್ ಪಾರಾಯಣ, ಆಕರ್ಷಣೀಯ ದಫ್ಫ್ ಪ್ರದರ್ಶನ, ಪ್ರತಿಭೋತ್ಸವ ವಿಜೇತ ಸೆಕ್ಟರ್ ಹಾಗೂ ಕಲಾಪ್ರತಿಭೆಗೆ ಬಹುಮಾನ ವಿತರಣೆ, ಸನ್ಮಾನ ಸಮಾರಂಭ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು
1. ಇಬ್ರಾಹಿಂ ಮದನಿ ಸಾಮಣಿಗೆ (ಛೇರ್ಮನ್, ಮೀಲಾದ್ ಸ್ವಾಗತ ಸಮಿತಿ)
2. ಇಸ್ಮಾಯಿಲ್ ಮದನಿನಗರ (ಅಧ್ಯಕ್ಷರು ಕೆಸಿಎಫ್ ದುಬೈ ನಾರ್ತ್ ಝೋನ್)
3. ಬಶೀರ್ ಪಡುಬಿದ್ರಿ (ಕನ್ವೀನರ್, ಮೀಲಾದ್ ಸ್ವಾಗತ ಸಮಿತಿ)
4. ಕಲಂದರ್ ಕಬಕ (ಕನ್ವೀನರ್, ಪ್ರತಿಭೋತ್ಸವ ಸಮಿತಿ)
5. ರಿಯಾಝ್ ಕೊಂಡಂಗೇರಿ (ಕೊಆರ್ಡಿನೇಟರ್, ಮೀಲಾದ್ ಸ್ವಾಗತ ಸಮಿತಿ
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ