ಪ್ರೀತಿಯ ಪ್ರವಾದಿ ಶಾಂತಿಯ ಹಾದಿ,ಸಮಾನತೆಯ ಸಂದೇಶ ವಾಹಕ ಲೋಕಾನುಗ್ರಹಿ ಹಝ್ರತ್ ಪೈಗಂಬರ್ ಮುಹಮ್ಮದ್ (ಸ.ಅ) ರವರ 1494 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ನವೆಂಬರ್ 22 ಶುಕ್ರವಾರ ಸಂಜೆ 7 ಗಂಟೆಗೆ ಅಲ್ ಮಾಸಾ ಹಾಲ್ ಮಸ್ಕತ್ ನ ರುವಿಯಲ್ಲಿ “ಹಬೀಬ್ (ಸ.ಅ.) ನಮ್ಮ ಜತೆಗಿರಲಿ” ಎಂಬ ಘೋಷ ವಾಕ್ಯ ದೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ವತಿಯಿಂದ ಬೃಹತ್ ಮೀಲಾದ್ ಕಾನ್ಫರೆನ್ಸ್- 2019 ನೆಡೆಯಲಿದೆ.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದ ಉದ್ಘಾಟನೆ ಯನ್ನು ಮೌಲಾನ ಇಬ್ರಾಹಿಂ ಸಖಾಫಿ ಅಧ್ಯಕ್ಷರು ಎಸ್ ವೈಸ್ ದಾವಣಗೆರೆ ಇವರು ನೆರವೇರಿಸಲಿದ್ದಾರೆ.ಎಸ್ಎಸ್ಎಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ರಾದ ಹಾಫಿಝ್ ಎಚ್. ಐ. ಸುಫಿಯಾನ್ ಸಖಾಫಿ ಕಾವಲ್ ಕಟ್ಟೆ ಇವರು ಮುಖ್ಯ ಪ್ರಭಾಷಣಗೈಯಲಿದ್ದಾರೆ.
ಹಾಗೂ ಖಾರಿ ಮುಹಮ್ಮದ್ ರಿಯಾಝುದ್ದೀನ್ ಅಶ್ರಫಿ ಮುಂಬಯಿ ಇವರಿಂದ ನ’ಅತೇ ಶರೀಫ್ ಮತ್ತು ಕೆಸಿಎಫ್ ಒಮಾನ್ ಕಾರ್ಯಕರ್ತರಿಂದ ಬುರ್ದ ಮಜ್ಲಿಸ್ ನಡೆಯಲಿದೆ ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಮೀಲಾದ್ ಸ್ವಾಗತ ಸಮಿತಿಯ ಚೆಯರ್ಮೆನ್ ಇಬ್ರಾಹಿಂ ಹಾಜಿ ಅತ್ರಾಡಿ ಹಾಗೂ ಕನ್ವೀನರ್ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಇವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ