ಮದೀನಾ ಮುನವ್ವರ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್(KSWA)
ಸೌದಿ ಅರೇಬಿಯಾ ರಾಷ್ಟ್ರೀಯ ಕಮಿಟಿ ವತಿಯಿಂದ ಒಂದು ದಿನದ ಅಧ್ಯಯನ ಶಿಬಿರ ಮದೀನಾ ಮುನವ್ವರದಲ್ಲಿ ನಡೆಯಿತು. ಫಾರೂಕ್ ಉಸ್ತಾದ್ ಕೊಡಗು ಶಿಬಿರವನ್ನು ಉದ್ಘಾಟಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ KSWA ರಾಷ್ಟ್ರೀಯ ಕಮಿಟಿ ಜೊತೆ ಕಾರ್ಯದರ್ಶಿ ಅಬ್ದುಲ್ ಸಮದ್ ಪೊನ್ನಂಪೇಟೆ ಅವರು ಮಾತನಾಡಿ, ಇಂದು ಸೌದಿಅರೇಬಿಯಾ ಮಾತ್ರವಲ್ದೇ ದುಬೈ, ಕತರ್, ಕುವೈಟ್ ಸೇರಿದಂತೆ ಜಿಸಿಸಿಯ ಎಲ್ಲೆಡೆ KSWA ವ್ಯಾಪಿಸಿದೆ ಎಂದರು.
ಕೊಡಗು ಜಿಲ್ಲಾ ಎಸ್.ವೈ.ಎಸ್ ಅಧ್ಯಕ್ಷ ಅಬ್ದುಲ್ ಹಫೀಳ್ ಸಅದಿ ಮಾತನಾಡಿ, ಕೊಡಗಿನ ಅನಿವಾಸಿಗಳಿಗೆ ಅಗತ್ಯವಾದ ಎಲ್ಲಾ ಸಹಾಯಕ್ಕೆ
KSWA ಸಂಘಟನೆ ಸಕ್ರೀಯವಾಗಿದೆ. 2014 ಡಿಸೆಂಬರ್ ರಿಯಾದಿನ ಮಲಾಝ್ ನಲ್ಲಿ ಕೆಲವೇ ಜನರಿಂದ ಸ್ಥಾಪಿಸಲ್ಪಟ್ಟ KSWA ಸಂಘಟನೆ ಇಂದು, ಸೌದಿ ಅರೇಬಿಯಾದ ಉದ್ದಗಲಕ್ಕೂ ವ್ಯಾಪಿಸಿದ್ದು, ಜಿಸಿಸಿಯಲ್ಲೇ
ಸೌದಿ ಅರೇಬಿಯಾ ಕಮಿಟಿ
ಹೆಚ್ಚಿನ ಸಕ್ರಿಯವಾಗಿದೆ ಎಂದರು.

ಶಾಫಿ ತಂಙಳ್ ಒಳಪಟ್ಟಣಂ ದುವಾ ನೆರವೇರಿಸಿ, ಸ್ವಲಾತ್ ನ ಮಹತ್ವ ವಿವರಿಸಿದರು.
KSWA ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಖಾಸೀಂ ಸಖಾಫಿ ಕೊಂಡಂಗೇರಿ ಅಧ್ಯಯನ ಶಿಬಿರ ನೆರವೇರಿಸಿದರು. ಇದೇ ವೇಳೆ ಶಿಬಿರಾರ್ಥಿಗಳಿಗೆ ಕ್ವಿಜ್, ಕಿರಾತ್ ಪಠಣ ಹಾಗೂ ಮತ್ತಿತರ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಕೊಡಗು ಜಿಲ್ಲಾ ಎಸ್.ಎಸ್.ಎಫ್ ಕೋಶಾಧಿಕಾರಿ ಮುಬಶ್ಶಿರ್ ಅಹ್ಸನಿ ಕೊಂಡಂಗೇರಿ, KSWA ರಾಷ್ಟ್ರೀಯ ಸಮಿತಿ ಅಧ್ಯಕ್ಷ ಸಿದ್ದೀಕ್ ಝುಹ್ರಿ, KSWA ರಾಷ್ಟ್ರೀಯ ಸಮಿತಿ ಚೇರ್ಮನ್ ಸಯ್ಯದ್ ಅಬ್ದುಲ್ ಖಾದರ್ ತಂಙಳ್ ಅಯ್ಯಂಗೇರಿ, ಮುಸ್ತಫಾ ಝೈನಿ ಕಂಬಿಬಾಣೆ, ಕೊಡಗು ತಾಲೂಕು ಪಂಚಾಯತ್ ಮಾಜಿ ಸದಸ್ಯ ರಫೀಕ್ ಶುಂಠಿ ಕೊಪ್ಪ, ಅಬೂಬಕ್ಕರ್ ಸ ಅದಿ ಎಮ್ಮೆಮಾಡ್, ಉಮ್ಮರ್ ಕಾಮಿಲ್ ಸಖಾಫಿ ಪರಪ್ಪು, ಯೂಸುಫ್ ಸಅದಿ ಅಯ್ಯಂಗೇರಿ ಮತ್ತಿತರರು ಉಪಸ್ಥಿತರಿದ್ದರು.

ಅಬ್ದುಲ್ ರಹ್ಮಾನ್ ಕಲ್ಲಡ್ಕ ಕಿರಾತ್ ಪಠಿಸಿದರು. KSWA ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಆಬೀದ್ ಕಂಡಕರ , ಕಾರ್ಯಕ್ರಮ ನಿರೂಪಿಸಿದರು.
ಅಬ್ದುಲ್ ರಹ್ಮಾನ್ ಸ್ವಾಗತಿಸಿದರು, ಮುಸ್ತಫಾ ಕಡಂಗ ವಂದಿಸಿದರು.
ವರದಿ :ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ