ಮಾಣಿ : ತಾಜುಲ್ ಉಲಮಾ ಇಹ್ಯಾ ಉಲೂಮುದ್ದೀನ್ ಮದ್ರಸ ಸತ್ತಿಕಲ್ಲು ಇದರ ವತಿಯಿಂದ ಮೀಲಾದ್ ಫೆಸ್ಟ್ ಕಾರ್ಯಕ್ರಮ ಶನಿವಾರ ನಡೆಯಿತು.ಅಬ್ದುಲ್ ನಾಸಿರ್ ಕಾಮಿಲ್ ಸಖಾಫಿ ನೇತೃತ್ವದಲ್ಲಿ ಹಝ್ರತ್ ಗೈಬಾನ್ ಶಾ ಫೀರ್ ವಲಿಯುಲ್ಲಾಹ್ ಪೇರಮೊಗರು ದರ್ಗಾ ಶರೀಫ್ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಸಂಸ್ಥೆಯ ಗೌರವಾಧ್ಯಕ್ಷ ಸಾದಾತ್ ತಂಙಳ್ ಕರ್ವೇಲು ದುಆ ನೆರವೇರಿಸಿದರು,ಅಬ್ದುಲ್ ಹಮೀದ್ ಸತ್ತಿಕಲ್ಲು ಅಧ್ಯಕ್ಷತೆ ವಹಿಸಿದ್ದರು,ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿದರು,ಮುಹಮ್ಮದ್ ಶರೀಫ್ ಸಖಾಫಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಶಿಕ್ ಸತ್ತಿಕಲ್ಲು,ನಿಯಾಝ್ ಸತ್ತಿಕಲ್ಲು,ಆಶ್’ಹರ್ ಪೇರಮೊಗರು ಎಂಬ ವಿದ್ಯಾರ್ಥಿಗಳಿಗಳನ್ನು ಸನ್ಮಾನಿಸಲಾಯಿತು.ಮಕ್ಕಳ ಪ್ರತಿಭಾ ಕಾರ್ಯಕ್ರಮದೊಂದಿಗೆ ಬುರ್ದಾ ಮಜ್ಲಿಸ್ ನಡೆಯಿತು, ದಾರುಲ್ ಮುಸ್ತಫಾ ನಚ್ಚಬೆಟ್ಟು ಇದರ ಆಸಿಫ್ ಮುಸ್ಲಿಯಾರ್ ಸತ್ತಿಕಲ್ಲು,ತಾಜುಲ್ ಉಲಮಾ ಫೌಂಡೇಶನ್ ಕರ್ವೇಲು ಇದರ ಅಧ್ಯಾಪಕರುಗಳು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು,ಅಝೀಝ್ ಸತ್ತಿಕಲ್ಲು ಹಾಗೂ ಸ್ವಾದಿಖ್ ಕಡಂಬು ಕಾರ್ಯಕ್ರಮ ನಿರೂಪಿಸಿದರು,ಅನ್ಸಾರ್ ಸತ್ತಿಕಲ್ಲು ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್