ಕೆಸಿಎಫ್ ಒಮಾನ್ ಸೊಹಾರ್ ಝೋನ್ ವತಿಯಿಂದ ನವೆಂಬರ್ 28 ಗುರುವಾರ ರಾತ್ರಿ ಅಲ್ ಮನಮ್ ಸೊಹಾರ್ ಹೊಟೆಲ್ ಫಲಜ್ ನಲ್ಲಿ “ಹಬೀಬ್ (ಸ.ಅ.) ನಮ್ಮ ಜತೆಗಿರಲಿ” ಎಂಬ ಘೋಷ ವಾಕ್ಯ ದೊಂದಿಗೆ ಮೀಲಾದ್ ಜಲ್ಸಾ ಮತ್ತು ಇಹ್ಸಾನ್ ಫೂಟ್ ಪ್ರಿಂಟ್- 2019 ಬಹಳ ಯಶಸ್ವಿಯಾಗಿ ನಡೆಯಿತು.


ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷರಾದ ಸಾದಿಕ್ ಕಾಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ಉದ್ಘಾಟನೆಯನ್ನು
ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ, ಸಂಘಟನಾಧ್ಯಕ್ಷರು ಕೆಸಿಎಫ್ ಒಮಾನ್ ಇವರು ನೆರವೇರಿಸಿದರು. ಎಸ್ಎಸ್ಎಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಹಾಫಿಝ್ ಎಚ್. ಐ. ಸುಫಿಯಾನ್ ಸಖಾಫಿ ಕಾವಲ್ ಕಟ್ಟೆ ಇವರು ಹುಬ್ಬುರಸೂಲ್ (ಸ.ಅ) ಮತ್ತು ಇಹ್ಸಾನ್ ಕರ್ನಾಟಕ ಉತ್ತರ ಕರ್ನಾಟಕದಲ್ಲಿ ಇಸ್ಲಾಮಿಕ್ ದ ಅವಾ ಕ್ರಾಂತಿಯನ್ನು ನಡೆಸಿದ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕಾರ್ಯಕ್ರಮದ ಬಗ್ಗೆ ಸ್ಕ್ರೀನ್ ಮುಖಾಂತರ ವಿವರಿಸಿದರು ಹಾಗೂ ಇದೇ ಸಂದರ್ಭದಲ್ಲಿ ಅವರನ್ನು ಝೋನ್ ವತಿಯಿಂದ ಗೌರವಿಸಲಾಯಿತು.
ಮುಸ್ತಫಾ ಸಖಾಫಿ ಮೂಳೂರು, ಸಿರಾಜುದ್ದೀನ್ ಮುಈನಿ ಕೈಕಂಬ ಮತ್ತು ಕೆಸಿಎಫ್ ಸೊಹಾರ್ ಝೋನ್ ಕಾರ್ಯಕರ್ತರಿಂದ ಮೌಲಿದ್ ಹಾಗೂ ಬುರ್ದಾ ಮಜ್ಲಿಸ್ ನಡೆಯಿತು. ಮುಖ್ಯ ಅತಿಥಿಗಳಾಗಿ ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸ್ವಾದಿಕ್ ಹಾಜಿ ಸುಳ್ಯ, ಎಸ್ಎಸ್ಎಫ್ ರಾಷ್ಟ್ರೀಯ ಕೌನ್ಸಿಲ್ ಸದಸ್ಯರಾದ ಅಬ್ದುಲ್ ರಹಮಾನ್ ಮೊಗರ್ಪಣೆ ಸುಳ್ಯ , ಕೆಸಿಎಫ್ ಒಮಾನ್ ಸಾಂತ್ವನ ವಿಭಾಗ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಎರ್ಮಾಳ್ ಇವರು ಭಾಗವಹಿಸಿ ಸಂದರ್ಭೋಚಿತ ವಾಗಿ ಮಾತನಾಡಿದರು.
ಇಹ್ಸಾನ್ ಕರ್ನಾಟಕ ಕೆಸಿಎಫ್ ಒಮಾನ್ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿರುವ ಕಲಂದರ್ ಬಾವ ಮುಸ್ಲಿಯಾರ್ ಪರಪ್ಪು , ಕೆಸಿಎಫ್ ಒಮಾನ್ ಇದರ ಮೀಡಿಯಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ, ಝೋನ್ ಕೋಶಾಧಿಕಾರಿ ಆರಿಫ್ ಮದಕ, ಫಾರೂಕ್ ಕೆ.ಪುರ, ಹಸನ್ ಬಾವ ಬೈಕಂಪಾಡಿ ಇವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೆಸಿಎಫ್ ಸೊಹಾರ್ ಝೋನ್ ಕಾರ್ಯಕಾರಿ ಸಮಿತಿಯ ಸದಸ್ಯರು, ಫಲಜ್ ಸೆಕ್ಟರ್ ಹಾಗೂ ಸೊಹಾರ್ ಸೆಕ್ಟರ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಶ್ರಫ್ ಕುತ್ತಾರ್ ಸ್ವಾಗತಿಸಿ ಶಫೀಕ್ ಎಲಿಮಲೆ ಸುಳ್ಯ ವಂದಿಸಿ ಮುಹಮ್ಮದ್ ಬಶೀರ್ ಕೆ.ಪುರ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ