ಜಿದ್ದಾ : ಆದೂರು ಮಜ್ಲಿಸ್ ಶಿಫಾಅ್ ಅಸ್ಸಖಾಫತಿಲ್ ಇಸ್ಲಾಮಿಯ್ಯ ಜಿದ್ದಾ ಘಟಕ ವತಿಯಿಂದ ಮಜ್ಲಿಸ್ ಸ್ನೇಹ ತೀರಂ ಜಿದ್ದಾದಲ್ಲಿ ನಡೆಯಿತು. ಇಂಡಿಯನ್ ಕಲ್ಚರಲ್ ಫೌಂಡೇಷನ್(I.C.F) ದಾಯಿ ಮುಸ್ತಫಾ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ ಮ್ಯಾಕ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಎಂ.ಡಿ.
ಹಾಜಿ ಅಬ್ದುಲ್ ಹಮೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಜ್ಲಿಸ್ ಎಜುಪಾರ್ಕ್ ಚೇರ್ಮನ್ ಸಯ್ಯದ್ ಮುಹಮ್ಮದ್ ಅಶ್ರಫ್ ಅಸ್ಸಖಾಫ್ ತಂಙಳ್ ಮದನಿ ಆದೂರು ಮುಖ್ಯ ಪ್ರಭಾಷಣ ನಡೆಸಿದರು.

ಕಾರ್ಯಕ್ರಮದ ಆರಂಭದಲ್ಲಿ ಬುರ್ದಾ ಮಜ್ಲಿಸ್ ಏರ್ಪಡಿಸಲಾಗಿತ್ತು. ಈ ವೇಳೆ KMCC ಕಾಸರಗೋಡು ಜಿಲ್ಲಾ ಅಧ್ಯಕ್ಷ ಹಸನ್ ಬತ್ತೇರಿ, ಮುಸ್ಲಿಂ ವೆಲ್ಫೇರ್ ಜಿದ್ದಾ ಸಮಿತಿ ಅಧ್ಯಕ್ಷ ಮುನೀರ್ ಮೊಗರಾಲ್, ಶಿಫಾ ಮಜ್ಲಿಸ್ ಸೌದಿ ಅರೇಬಿಯಾ ಆರ್ಗನೈಸರ್ ಮುಹಮ್ಮದ್ ಕಮಾಲ್ ರಝ್ವಿ ಅಂಜದಿ ಕೆಸಿಎಫ್ ರಾಷ್ಟ್ರೀಯ ಖಜಾಂಚಿ ಮುಹಮ್ಮದ್ ಕಲ್ಲರ್ಬೆ, ಸಯ್ಯದ್ ಅಬ್ದುಲ್ ರಹ್ಮಾನ್ ಉಚ್ಚಿಲ ತಂಙಳ್, ಕೆಸಿಎಫ್ ಜಿದ್ದಾ ಝೋನ್ ಕಾರ್ಯದರ್ಶಿ ಇಬ್ರಾಹಿಂ ಕಿನ್ಯಾ ಮತ್ತಿತರರು ಉಪಸ್ಥಿತರಿದ್ದರು. ಅಶ್ರಫ್ ಎಂ.ಎಸ್ ಸ್ವಾಗತಿಸಿ ವಂದಿಸಿದರು. ಡಿ.ಕೆ.ಲತೀಫ್ ಹಾಜಿ ಕನ್ಯಾನ ಕಾರ್ಯಕ್ರಮ ನಿರೂಪಿಸಿದರು.
ವರದಿ : ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ