ದೋಹಾ: ಚಾರಿಟಿ ಹೆಸರಿನಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕತರ್ನ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಹೇಳಿದೆ.ಈ ಬಗ್ಗೆ ಅನುಮಾನವಿರುವವರ ವಿರುದ್ಧ ಸಚಿವಾಲಯ ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ. ಅಂತಹ ಜನರ ಬಗ್ಗೆ ಸಚಿವಾಲಯವು ಎಚ್ಚರಿಕೆ ನೀಡಿದೆ.
ವಾಟ್ಸ್ ಆ್ಯಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಹಣ ಸಂಗ್ರಹಿಸುವರನ್ನು ಸಚಿವಾಲಯವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಡೋಮೆಂಟ್ ಜನರಲ್ ಡೈರೆಕ್ಟರೇಟ್ ಅಧಿಕಾರಿ ಮುಹಮ್ಮದ್ ಯಾಕೂಬ್ ಅಲ್-ಅಲಿ ಹೇಳಿದ್ದಾರೆ.
ದತ್ತಿ ನೀಡುವಿಕೆ ಮತ್ತು ಝಕಾತ್ ಸಂಗ್ರಹವನ್ನು ಅನುಮೋದಿತ ರೀತಿಯಲ್ಲಿ ಉತ್ತೇಜಿಸುವ ಉದ್ದೇಶವನ್ನು ಸಚಿವಾಲಯ ಹೊಂದಿದೆ. ಸ್ಥಳೀಯ ಚಾನೆಲ್ನೊಂದಿಗೆ ಮಾತನಾಡಿದ ಅಲ್-ಅಲಿ, ಸಂದೇಹಾಸ್ಪದ ಜನರನ್ನು ಗಮನನಲ್ಲಿಡಬೇಕು ಎಂದು ಹೇಳಿದರು.
ಚಾರಿಟಿ ನಿಯಂತ್ರಕ ಪ್ರಾಧಿಕಾರದೊಂದಿಗೆ ಸಹಕರಿಸಿ ಸಚಿವಾಲಯವು ಈ ಕ್ರಮ ಕೈಗೊಳ್ಳುತ್ತಿದೆ ಎಂದರು. ಅಪರಿಚಿತ ವ್ಯಕ್ತಿಗಳು ವಿವಿಧ ಯೋಜನೆಗಳಿಗೆ ಹಣ ಸಂಗ್ರಹಿಸುತ್ತಿದ್ದಾರೆ. ಅಂತಹ ಜನರು ಬಡ ಕುಟುಂಬಗಳ ದುಃಸ್ಥಿತಿ ಬಗ್ಗೆ ವಿವರಿಸಿ ಸಹಕಾರ ಪಡೆಯುತ್ತಾರೆ. ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುವವರು ಅನುಮೋದಿತ ರೀತಿಯನ್ನು ಅವಲಂಬಿಸಬೇಕು ಎಂದು ಅಲ್ ಅಲಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು