ಬೆಂಗಳೂರು,ಡಿ.9: ಜನತಾ ನ್ಯಾಯಾಲಯದಲ್ಲಿ ಅನರ್ಹರ ಪರವಾಗಿ ತೀರ್ಪು ಬಂದಿದೆ. ಮತದಾರರು ಅನರ್ಹರ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದರು.
ಉಪಚುನಾವಣೆಯಲ್ಲಿ ಜನತೆ ನೀಡಿರುವ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಸಾಮಾನ್ಯವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆ ಯಲ್ಲಿ ಗೆಲ್ಲುವುದು ಸಹಜ. ಈಗಲೂ ಅದೇ ರೀತಿ ಆಗಿದೆ ಎಂದರು.
ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ಯಾರು ಭಾವಿಸಬೇಕಿಲ್ಲ. ಉಪಚುನಾವಣೆ ಗಳೇ ಬೇರೆ ಸಾರ್ವತ್ರಿಕ ಚುನಾವಣೆ ಗಳೇ ಬೇರೆ.. ಪಕ್ಷವನ್ನು ಸಂಘಟಿಸುವತ್ತ ನಾವು ಗಮನಹರಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಈ ಚುನಾವಣೆಯ ಫಲಿತಾಂಶದ ಬಗ್ಗೆ ಕಾರ್ಯಕರ್ತರು ಹೆಚ್ಚು ತಲೆಕೆಡಿಸಿಕೊಂಳ್ಳದೇ ಪಕ್ಷವನ್ನು ಸದೃಢ ಹಾಗೂ ಗಟ್ಟಿಗೊಳ್ಳಿಸಲು ಬೇರು ಮಟ್ಟದಿಂದಲೇ ಪ್ರಯತ್ನ ನಡೆಸಬೇಕಾಗಿದೆ ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ