ಮುಂಬೈ : ಬಿಜೆಪಿಯ ಮಾಜಿ ಮಿತ್ರ ಪಕ್ಷ ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ , ಪೌರತ್ವ ತಿದ್ದುಪಡೆ ಕಾಯ್ದೆಯ ಮೂಲಕ ಕೇಂದ್ರ ಸರಕಾರ ಹಿಂದೂಗಳು ಹಾಗೂ ಮುಸ್ಲಿಮರ ‘ಅಗೋಚರ ವಿಭಜನೆಗೆ’ ಯತ್ನಿಸುತ್ತಿದೆ ಎಂದು ಬರೆದಿದೆ.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಸೇನೆಯ ಈ ಹೇಳಿಕೆ ಮಹತ್ವ ಪಡೆದಿದೆ. ಈ ರೀತಿಯಾಗಿ ಹಿಂದೂ ಅಕ್ರಮ ವಲಸಿಗರನ್ನು ಆಯ್ದು ಅವರಿಗೆ ಮಾತ್ರ ಪೌರತ್ವ ನೀಡುವುದು ದೇಶದಲ್ಲಿ ಧಾರ್ಮಿಕ ಯುದ್ಧಕ್ಕೆ ಆಸ್ಪದ ನೀಡುವ ಆತಂಕವನ್ನೂ ಸೇನೆ ವ್ಯಕ್ತಪಡಿಸಿದೆ.
ಈ ಮಸೂದೆಯ ಹೆಸರಿನಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುವುದು ದೇಶದ ಹಿತಾಸಕ್ತಿಯಲಿಲ್ಲ ಎಂದು ಹೇಳಿದ ಶಿವಸೇನೆ, ”ಈ ದೇಶದಲ್ಲಿ ಈಗ ಸಮಸ್ಯೆಗಳಿಗೆ ಕೊರತೆಯಿಲ್ಲದೇ ಇರುವಾಗ ಈ ಮಸೂದೆ ಮಂಡನೆಯಂತಹ ಕ್ರಮಗಳ ಮೂಲಕ ಹೊಸ ಸಮಸ್ಯೆಗಳನ್ನು ಆಹ್ವಾನಿಸುತ್ತಿದ್ದೇವೆ, ಈ ಮಸೂದೆಯ ವಿಚಾರದಲ್ಲಿ ಕೇಂದ್ರವು ಹಿಂದೂಗಳು ಹಾಗೂ ಮುಸ್ಲಿಮರ ಅಗೋಚರ ವಿಭಜನೆ ಮಾಡಿದಂತೆ ಕಾಣಿಸುತ್ತದೆ” ಎಂದು ಸಾಮ್ನಾ ಸಂಪಾದಕೀಯದಲ್ಲಿ ಬರೆಯಲಾಗಿದೆ.
ಈಶಾನ್ಯ ಭಾರತದ ಹೆಚ್ಚಿನ ರಾಜ್ಯಗಳು ಹಾಗೂ ಬಿಜೆಪಿಯು ಜೆಡಿಯು ಜತೆ ಮೈತ್ರಿ ಮಾಡಿಕೊಂಡಿರುವ ಬಿಹಾರ ಕೂಡ ಈ ಮಸೂದೆಯನ್ನು ವಿರೋಧಿಸುತ್ತಿದೆ ಎಂದು ಲೋಕಸಭೆಯಲ್ಲಿ 18 ಸದಸ್ಯರ ಬಲ ಹೊಂದಿರುವ ಶಿವಸೇನೆ ಹೇಳಿದೆ.
ಪಾಕಿಸ್ತಾನ ವಿರುದ್ಧ ಕಠಿಣ ನಿಲುವು ತಳೆದಂತೆ ಹಿಂದೂಗಳ ಮೇಲೆ ದೌರ್ಜನ್ಯವೆಸಗುವ ಕೆಲ ನೆರೆಯ ರಾಷ್ಟ್ರಗಳ ವಿರುದ್ಧವೂ ಕಠಿಣ ಕ್ರಮಕ್ಕೆ ಮುಂದಾಗುವಂತೆಯೂ ಶಿವಸೇನೆ ಪ್ರಧಾನಿಯನ್ನು ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ