ಬಾಗಲಕೋಟೆ : ಮದುವೆಯ ದಿನಾಂಕ ನಿಗದಿ ಪಡಿಸಿ ತಯಾರಿ ನಡೆಸುತ್ತಿದ್ದ ವೇಳೆ ಉಂಟಾದ ಭಾರೀ ಜಲ ಪ್ರವಾಹದಲ್ಲಿ ಮನೆ ಕಳಕೊಂಡು ಸಮೀಪದ ಉರ್ದು ಶಾಲೆಗಳಲ್ಲಿ ನಿರಾಶ್ರಿತರಾಗಿದ್ದ ಎರಡು ಕುಟುಂಬಗಳ ಹೆಣ್ಮಕ್ಕಳ ವಿವಾಹವನ್ನು ಎಸ್ಸೆಸ್ಸೆಫ್ ಬಾಗಲಕೋಟೆ ಜಿಲ್ಲೆಯ ವತಿಯಿಂದ ಕಲಾದಗಿ ಶಾದೀ ಮಹಲ್ ನಲ್ಲಿ ನಡೆಸಿ ಕೊಡಲಾಗುತ್ತಿದೆ.

ಡಿಸೆಂಬರ್ 15 ರವಿವಾರ ಬೆಳಗ್ಗೆ 11ಗಂಟೆಗೆ ನಿಖಾಹ್ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದ್ದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿ ಅಧ್ಯಕ್ಷತೆ ವಹಿಸಲಿದ್ದು,.ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ NKM ಶಾಫಿ ಸಅದಿ ಬೆಂಗಳೂರು, ಮುಸ್ಲಿಂ ಜಮಾಅತ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಮೌಲಾನ ಅಬೂ ಸುಫ್ಯಾನ್ ಮದನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ದಿಕ್ಸೂಚಿ ಭಾಷಣ ಮಾಡಲಿದ್ದು, ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಆರಿಫ್ ಕೋಡಿ, ರಾಜ್ಯ ಎಸ್ಸೆಸ್ಸೆಫ್ ನಾಯಕರಾದ ಮೌಲಾನಾ ಗುಲಾಂ ಹುಸೈನ್ ನೂರಿ ಗಂಗಾವತಿ, ಕೆ ಎಂ ಮುಸ್ತಫಾ ನಈಮಿ ಹಾವೇರಿ, ನವಾಝ್ ಬೆಂಗಳೂರು, ಅಬ್ದುರ್ರವೂಫ್ ಕುಂದಾಪುರ ಹಾಗೂ ಇನ್ನಿತರ ಉಲಮಾ ಉಮರಾಗಳು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ