ಮಂಗಳೂರು, ಡಿ.11: ಉಳ್ಳಾಲ ದರ್ಗಾ ಮತ್ತು ಅಧೀನ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಮೊಹಲ್ಲ- ವಿವಿಧ ಮದ್ರಸ, ಶಾಲಾ ಕಾಲೇಜುಗಳ ಅಧ್ಯಾಪಕರಿಗೆ ಬಾಕಿ ಇರಿಸಿರುವ ವೇತನವನ್ನು ಶೀಘ್ರ ಪಾವತಿಸಬೇಕು, ನ್ಯಾಯಸಮ್ಮತವಾದ ಚುನಾವಣೆ ನಡೆಸಿ ಉತ್ತಮ ಆಡಳಿತ ಸಮಿತಿ ರೂಪಿಸಬೇಕು ಎಂದು ಉಳ್ಳಾಲದ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಆಗ್ರಹಿಸಿದೆ.
ಉಳ್ಳಾಲ ದರ್ಗಾ ಸಮಿತಿಗೆ ಚುನಾವಣೆ ನಡೆಸದೇ, ಅನಧಿಕೃತವಾಗಿ ಆಡಳಿತವನ್ನು ವಶಪಡಿಸಿಕೊಂಡು ಸ್ವಯಂ ಘೋಷಿತವಾಗಿ ಪದಾಧಿಕಾರಿಗಳನ್ನು ನೇಮಿಸಿ ಪ್ರಸ್ತುತ ವಜಾಗೊಂಡಿರುವ ಅಬ್ದುಲ್ ರಶೀದ್ ಹಾಜಿ ಮತ್ತು ಸಹವರ್ತಿಗಳು ಕಳೆದ ಮೂರೂವರೆ ವರ್ಷಗಳಿಂದ ಕಾನೂನು ಉಲ್ಲಂಘನೆ, ಅವ್ಯವಹಾರ, ಭ್ರಷ್ಟಾಚಾರ, ದಬ್ಬಾಳಿಕೆ, ಸರ್ವಾಧಿಕಾರ ಮತ್ತು ಸಮಾಜಘಾತುಕ ಶಕ್ತಿಗಳಿಗೆ ಪೋಷಣೆ ನೀಡುತ್ತಾ ಬಂದಿದ್ದಾರೆ.
ಈ ಬಗ್ಗೆ ಊರಿನ ಸಮಸ್ತ ನಾಗರಿಕರ ದೂರಿನಂತೆ ರಾಜ್ಯ ವಕ್ಫ್ ಮಂಡಳಿ ಉಳ್ಳಾಲ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಿಸಿರುವುದು ಸ್ವಾಗತಾರ್ಹ ಎಂದು ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟ ಅಧ್ಯಕ್ಷ ಪಿ.ಎಸ್. ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಅಲ್ ಕಾಮಿಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಉಳ್ಳಾಲ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಿಸಿದ ಬಗ್ಗೆ ಉಚ್ಛಾಟಿತ ಆಡಳಿತ ಸಮಿತಿಯು, ಅಯೋಧ್ಯೆ, ದತ್ತಪೀಠದಂತೆ ಉಳ್ಳಾಲ ದರ್ಗಾವನ್ನೂ ಸರಕಾರ ವಶಪಡಿಸಿಕೊಳ್ಳಲು ಮುಂದಾಗಿದೆ ಎಂಬ ತಪ್ಪು ಮಾಹಿತಿ ರವಾನಿಸುತ್ತಿದೆ. ಸರಕಾರದ ವಿರುದ್ಧ ಜನತೆ ಸಿಡಿದೇಳುವಂತೆ ಮಾಡಲಾಗುತ್ತಿದೆ. ಆಡಳಿತಾಧಿಕಾರಿಯನ್ನು ಹಿಮ್ಮೆಟ್ಟಿಸುತ್ತೇವೆ ಎಂದು ಬಹಿರಂಗವಾಗಿ ಕರೆ ನೀಡುತ್ತಿರುವ ಅಬ್ದುಲ್ ರಶೀದ್ ಹಾಜಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದಿನ ಆಡಳಿತ ಸಮಿತಿಯು ದರ್ಗಾ ಅಧೀನದ ಪಂಪ್ವೆಲ್ ಬಳಿಯ ಜಾಗ ಮತ್ತು ಕಟ್ಟಡವನ್ನು ಮಾರಾಟ ಮಾಡಿದೆ. ಉಳ್ಳಾಲ ಒಂಭತ್ತುಕೆರೆಯ ಸಯ್ಯಿದ್ ಮದನಿ ತಾಂತ್ರಿಕ ಸಂಸ್ಥೆ ಹೆಸರು ಬದಲಾಯಿಸಲಾಗಿದೆ. ವಕ್ಫ್ ಮಂಡಳಿ ನಿರ್ಣಯ, ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಮದ್ರಸಾ ಪಠ್ಯ ಬದಲಿಸಿ ಗೊಂದಲ ಸೃಷ್ಟಿಸಲಾಗಿದೆ, ಖಾಝಿ ತೀರ್ಮಾನಕ್ಕೆ ವಿರುದ್ಧವಾಗಿ ಹಬ್ಬಗಳ ಆಚರಣೆಯಲ್ಲಿ ಗೊಂದಲ ಮೂಡಿಸಲಾಗಿದೆ, ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಆಗಿಲ್ಲ ಎಂದು ಆರೋಪಿಸಿದರು.
ಒಕ್ಕೂಟ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಂಚಿಲ, ಸಮಿತಿ ಸದಸ್ಯರಾದ ರಿಯಾಝ್ ಅಳೇಕಲ, ಇಜಾಝ್ ಮದನಿನಗರ, ಮನ್ಸೂರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್