
ದುಬೈ: ಕೊಂಡಂಗೇರಿಯ ಅನಿವಾಸಿ ಸದಸ್ಯರುಗಳ ಒಕ್ಕೂಟವಾದ ಕೊಂಡಂಗೇರಿ ಸುನ್ನಿ ಮುಸ್ಲಿಂ ಜಮಾಅತ್ ಯುಎಇ ಸಮಿತಿ ವತಿಯಿಂದ ಈ ವರ್ಷದ ಮೀಲಾದ್ ಸಮಾವೇಶ ಹಾಗೂ ವಾರ್ಷಿಕ ಮಹಾ ಸಭೆ ದುಬೈ ಕ್ರೀಕ್ ನಲ್ಲಿರುವ ಧೋ ಕ್ರೂಸ್ ಬೋಟ್ ನಲ್ಲಿ ನಡೆಸಲಾಯಿತು. ಸಮಿತಿ ಅಧ್ಯಕ್ಷರಾದ ಹೆ ಹೆಚ್ ಅಬ್ದುಲ್ಲಾ ರವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಂಝ ಸಅದಿ ಉದ್ಘಾಟಿಸಿದರು.
ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸರ್ವವನ್ನು ಕಳೆದುಕೊಂಡು ಬೀದಿಪಾಲಾದ ಜನರ ಕಣ್ಣೀರೊರೆಸಲು ತನ್ನ ಒಂದೂವರೆ ಎಕರೆ ಜಮೀನನ್ನು ಧಾನವಾಗಿ ನೀಡಿದ ಕೊಂಡಂಗೇರಿಯ ಅಬ್ದುಲ್ಲಾ ಹಾಜಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು ಅವರನ್ನು ಈ ಸಂಧರ್ಭದಲ್ಲಿ ನೆನಪಿನ ಕಾಣಿಕೆ ನೀಡಿ ಸನ್ಮಾಸಲಾಯಿತು, ಶಾಫಿ ಸಖಾಫಿ ನೇತೃತ್ವದಲ್ಲಿ ಮೌಲೂದ್ ಪಾರಾಯಣ ನಡೆಯಿತು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ಸಭೆಗೆ ಹೊಸ ಹುರುಪನ್ನು ನೀಡಿತು.
ನಂತರ ನಡೆದ ಮಹಾಸಭೆಯಲ್ಲಿ ಹಾಲೀ ವರ್ಷದಲ್ಲಿ ಊರಿನಲ್ಲಿ ನಡೆಸಿದ ಸಾಂತ್ವನ ಕಾರ್ಯಗಳನ್ನು ವಿವರಿಸಿ ವಾರ್ಷಿಕ ವರದಿಯನ್ನು ವಾಚಿಸಲಾಯಿತು. ನೂತನ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಬ್ದುಲ್ಲ ಹೆಚ್ ಹೆಚ್ ಮತ್ತು ಪ್ರಧಾನ ಕಾರ್ಯಧರ್ಶಿಯಾಗಿ ಇರ್ಷಾದ್ ಎ ಹೆಚ್ ಹಾಗೂ ಕೋಶಾಧಿಕಾರಿಯಾಗಿ ಮುಹಮ್ಮದ್ ಹಾಜಿ ಪಿ ಇ ರವರನ್ನು ಪುನರಾಯ್ಕೆ ಮಾಡಲಾಯಿತು. ಅದೇ ರೀತಿ 15 ಸದಸ್ಯರುಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಹಿರಿಯ ಸದಸ್ಯರುಗಳಾದ ಅಬ್ದುಲ್ಲಾ ಎಲಿಯಂಗಾಡು, ಅಬ್ದುಲ್ಲಾ ಮುಸ್ಲಿಯಾರ್, ಆಝೀಝ್ ಹೆಚ್ ವೈ, ಹಸ್ಸನ್ ಕುಞ ಕೇತುಮೊಟ್ಟೆ, ಸೇರಿದಂತೆ ಯುಎಇಯ ವಿವಿಧ ಕಡೆಗಳಲ್ಲಿ ಕಾರ್ಯನಿರ್ವಸುವ ಹಲವಾರು ಕೊಂಡಂಗೇರಿಯ ಸದಸ್ಯರುಗಳು ಭಾಗವಹಿಸಿದ್ದರು. ರಿಯಾಝ್ ಕೆ ವೈ ಸ್ವಾಗತ ನಿರ್ವಹಿಸಿದರು. ಇರ್ಷಾದ್ ಎ ಹೆಚ್ ಕಾರ್ಯಕ್ರಮ ನಿರೂಪಿಸಿದ್ದು, ಕೊನೆಯಲ್ಲಿ ಮುಜೀಬ್ ಪಿ ಎ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ