ದುಬೈ: ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಸಂಸ್ಥೆಗಳು ನೌಕರರ ಕೆಲಸದ ಸಮಯದಲ್ಲಿ ರಿಯಾಯತಿಯನ್ನು ನೀಡಬೇಕೆಂದು ಯುಎಇ ಕಾರ್ಮಿಕ ಸಚಿವಾಲಯ ಒತ್ತಾಯಿಸಿದೆ. ನೌಕರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.
ಯುಎಇ ಅಧಿಕಾರಿಗಳು ಕೆಟ್ಟ ವಾತಾವರಣದಲ್ಲಿ ಉದ್ಯೋಗ ಸಮಯದಲ್ಲಿ ವಿನಾಯಿತಿಗೆ ಕರೆ ನೀಡಿದ್ದು, ಹವಾಮಾನ ಕೆಟ್ಟದಾಗಿದ್ದರೆ, ಕೆಲಸದ ಸಮಯದಲ್ಲಿ ರಾಜಿ ಮಾಡಿಕೊಳ್ಳಲು ತಯಾರಾಗಬೇಕು ಮಳೆ ಮತ್ತು ಮಂಜಿನ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತೆಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಸಂಸ್ಥೆಗಳು ಕಾರ್ಮಿಕರ ಪ್ರಯಾಣ ಸುರಕ್ಷಿತವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಕಳೆದ ವರ್ಷ ಸಚಿವಾಲಯ ಹೊರಡಿಸಿದ ಸುತ್ತೋಲೆಯನ್ನು ಉಲ್ಲೇಖಿಸಿ ಸಚಿವಾಲಯ ಮತ್ತೆ ನಿರ್ದೇಶನ ನೀಡಿದೆ.
ಹವಾಮಾನ ಬದಲಾವಣೆಯ ಸಂದರ್ಭದಲ್ಲಿ ಉದ್ಯೋಗದಾತರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜಾಗರೂಕರಾಗಿರಬೇಕು. ನೌಕರರು ಕೆಲಸಕ್ಕೆ ತಡವಾಗಿ ಬರಬಹುದು ಎಂಬುದನ್ಬು ಪರಿಗಣಿಸಬೇಕು. ಈ ಸಂದರ್ಭಗಳಲ್ಲಿ ಸ್ವಯಂ ಸುರಕ್ಷತೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ನೌಕರರಿಗೆ ತಿಳಿಸಲು ಸಚಿವಾಲಯ ಟ್ವಿಟರ್ ಮೂಲಕ ಕರೆ ನೀಡಿದೆ. ಇದನ್ನು ಉಲ್ಲೇಖಿಸಿ ಸಚಿವಾಲಯ ವಿಡಿಯೋ ಕೂಡ ಬಿಡುಗಡೆ ಮಾಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ