ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ನಮ್ಮ ರಾಜ್ಯ ಪ್ರಯೋಗ ಶಾಲೆ ಅಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಗುಡುಗಿದ್ದಾರೆ.ಮಾಜಿ ಸಚಿವ ಯುಟಿ ಖಾದರ್ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಬಿಜೆಪಿ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ನಿರ್ಧರಿಸಿರುವುದು ಸರಿಯಲ್ಲ. ಬಿಜೆಪಿಯ ಈ ಗುಪ್ತ ಅಜೆಂಡಾ ಹಿಂದೆ ಚುನಾವಣಾ ರಾಜಕೀಯವಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು.
ಅತಿವೃಷ್ಟಿಯಿಂದ ರಾಜ್ಯದಲ್ಲಿ ಹಾನಿ ಸಂಭವಿಸಿ ಅನೇಕ ಮಂದಿ ವಾಸ್ತವ್ಯದ ಮೂಲ ದಾಖಲೆಯನ್ನು ಕಳೆದುಕೊಂಡಿದ್ದಾರೆ. ಹಾಗಾದರೆ ಅವರು ದೇಶದ ಪ್ರಜೆಗಳು ಅಲ್ಲವೇ? ಇಂತಹ ಪರಿಸ್ಥಿತಿ ಇರುವಾಗ ನಿರ್ದಿಷ್ಟ ಮಾನದಂಡ ಇಲ್ಲದೆ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದು ಬೇಡ ಎಂದರು.
ಕರ್ನಾಟಕ ಸೇರಿದಂತೆ ಬಿಜೆಪಿ ರಾಜ್ಯಗಳಲ್ಲಿ ಮಾತ್ರ ಪೌರತ್ವ ಕಾಯ್ದೆ ಜಾರಿಗೆ ತರಲಾಗುತ್ತಿದೆ. ಉಳಿದಂತೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ತೆಲಂಗಾಣಗಳಲ್ಲಿ ಯಾಕೆ ಜಾರಿಗೆ ತರುತ್ತಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಅದನ್ನು ಮುಸ್ಲಿಮರು ನಡೆಸಿಲ್ಲ. ಅಸ್ಸಾಂನಲ್ಲಿ ಬಿಜೆಪಿಯ ಮಿತ್ರ ಪಕ್ಷಗಳೇ ವಿರೋಧಿಸಿವೆ ಎಂದು ಖಾದರ್ ತಿಳಿಸಿದರು.
ಕಾಯ್ದೆ ಬಗ್ಗೆ ಸಂದೇಹವಿರುವಾಗ ಅದನ್ನು ಸರಿಪಡಿಸುವುದು ಕೇಂದ್ರ ಮಾಡಬೇಕಾದ ಕೆಲಸ. ಅದು ಬಿಟ್ಟು ಕಡ್ಡಾಯ ಜಾರಿಗೆ ಹೊರಟರೆ ಅದರ ಅನುಷ್ಠಾನಕ್ಕೆ ಆಸ್ಪದ ನೀಡುವುದಿಲ್ಲ ಎಂದು ಯುಟಿ ಖಾದರ್ ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ