janadhvani

Kannada Online News Paper

ಗೋಲಿಬಾರ್: ಮೃತರ ನಿವಾಸಕ್ಕೆ ಎಚ್ಡಿಕೆ ಭೇಟಿ- ಸಾಂತ್ವನ, ತಲಾ 5 ಲಕ್ಷ ಪರಿಹಾರ

ಮಂಗಳೂರು,ಡಿ.22: ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.

ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್‌ ಮೂಲಕ ತಲಾ 5 ಲಕ್ಷ ಪರಿಹಾರ ನೀಡಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಸಣ್ಣ ಪ್ರಮಾಣದ ಪ್ರತಿಭಟನೆಯಲ್ಲಿ ಉದ್ರೇಕ ಗೊಂಡ ಪೊಲೀಸರು ನಾಗರಿಕರ ಮೇಲೆ ಗುಂಡು ಹಾರಿಸಿದ್ದು, ನಗರದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಅಮಾಯಕ ಯುವಕರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ.