ಮಂಗಳೂರು,ಡಿ.22: ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.
ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್ ಮೂಲಕ ತಲಾ 5 ಲಕ್ಷ ಪರಿಹಾರ ನೀಡಿದ್ದಾರೆ.
ಮಂಗಳೂರಿನಲ್ಲಿ ಪೊಲೀಸರ ಗೋಲಿಬಾರ್ ಗೆ ಬಲಿಯಾದ ಜಲೀಲ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ.
— H D Kumaraswamy (@hd_kumaraswamy) December 22, 2019
Visited the family of Jaleel who was killed in the recent police firing at #Mangaluru.#CAANRCprotest pic.twitter.com/HbiG1vzdhc
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಸಣ್ಣ ಪ್ರಮಾಣದ ಪ್ರತಿಭಟನೆಯಲ್ಲಿ ಉದ್ರೇಕ ಗೊಂಡ ಪೊಲೀಸರು ನಾಗರಿಕರ ಮೇಲೆ ಗುಂಡು ಹಾರಿಸಿದ್ದು, ನಗರದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಅಮಾಯಕ ಯುವಕರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ.






