ಚೆನ್ನೈ, ಡಿಸೆಂಬರ್ 26: ಹಿಂದು ಧರ್ಮದಲ್ಲಿನ ಜಾತಿ ತಾರತಮ್ಯಕ್ಕೆ ನೊಂದು, ಹಾಗೂ ಸರ್ಕಾರದ ತಾರತಮ್ಯ ನೀತಿಗೆ ನೊಂದು ಸಾವಿರಾರು ಮಂದಿ ರೈತರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವುದಾಗಿ ಘೋಷಿಸಿದ್ದಾರೆ.
ತಮಿಳುನಾಡಿನ ಮೆಪ್ಪುಪಾಲಯಂ ನ ಮೂರು ಸಾವಿರಕ್ಕೂ ಹೆಚ್ಚು ದಲಿತರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುತ್ತಿರುವುದಾಗಿ ಘೋಷಿಸಿವೆ. ‘ತಮಿಳ್ ಪುಲಿಗಲ್’ ಸಂಘಟನೆಯ ವಾರ್ಷಿಕ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಈ ಮತಾಂತರಕ್ಕೆ ಹಿಂದು ಧರ್ಮದಲ್ಲಿನ ಜಾತಿ ತಾರತಮ್ಯ ಮತ್ತು ಡಿಸೆಂಬರ್ 2 ರಂದು ಮೆಟ್ಟುಪಾಲ್ಯಂ ಬಳಿಯ ನಡೂರಿನಲ್ಲಿ ದಲಿತರ ಮನೆ ಮೇಲೆ ಗೋಡೆ ಕುಸಿದು 17 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ ಎಂಬುದು ಸಹ ಇಸ್ಲಾಂ ಧರ್ಮ ಮತಾಂತರಕ್ಕೆ ಪ್ರಮುಖ ಕಾರಣ.
ಜನವರಿ ಐದರಂದು ಮೆಟ್ಟುಪಾಲ್ಯಂ ನ ವಿವಿಧ ಗ್ರಾಮಗಳು, ಪಟ್ಟಣಗಳ ದಲಿತರು ಸಾಮೂಹಿಕವಾಗಿ ಇಸ್ಲಾಂ ಧರ್ಮ ಸೇರುವುದಾಗಿ ಪ್ರಕಟಿಸಿದ್ದಾರೆ.
ಡಿಸೆಂಬರ್ 2 ರಂದು ಸುರಿದ ಮಳೆಗೆ ಮೆಟ್ಟುಪಾಲ್ಯಂ ನಡೂರು ಗ್ರಾಮದಲ್ಲಿ ಹದಿನೈದು ಅಡಿ ಎತ್ತರದ ಕಾಂಪೌಂಡ್ ಒಂದು ಕುಸಿದು 10 ಮಹಿಳೆ, ಇಬ್ಬರು ಮಕ್ಕಳು ಸೇರಿ ಹದಿನೇಳು ಮಂದಿ ಮರಣ ಹೊಂದಿದ್ದರು.
ಆ ಗೋಡೆಯನ್ನು ದಲಿತರ ಕೇರಿಗೆ ಅಡ್ಡಲಾಗಿ ಕಟ್ಟಲಾಗಿತ್ತು. ದಲಿತರು ತಮ್ಮ ಮನೆಯ ಅಂಗಳ ಪ್ರವೇಶಿಸದಿರಲೆಂದೇ ಮನೆಯ ಮಾಲೀಕ ಗೋಡೆ ಕಟ್ಟಿಸಿದ್ದ, ನಂತರ ಆತನನ್ನು ಪೊಲೀಸರು ಬಂಧಿಸಿದರು. ಆತ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ದಲಿತರು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವ ನಿರ್ಣಯ ಕೈಗೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ