ಉಡುಪಿ: ನೈಜ ಭಾರತೀಯರ ಅಸ್ಥಿತ್ವವನ್ನು ಮತ್ತು ಭಾರತೀಯತೆಯನ್ನು ಪ್ರಶ್ನಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವೆನಿಸುವ ಪೌರತ್ವ ಕಾಯ್ದೆ (CAA ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (NRC) ಯನ್ನು ತಿದ್ದುಪಡಿ ಮಾಡುವ ಕೇಂದ್ರ ಸರ್ಕಾರದ ಅಸಾಂವಿಧಾನಿಕ ನಡೆಯನ್ನು ವಿರೋಧಿಸಿ 30/12/2019 ಸೋಮವಾರ ನಾಳೆ ಕಾಪು ಪೇಟೆಯಲ್ಲಿ ಬೆಳಿಗ್ಗೆ 10.00 ಘಂಟೆಗೆ ಜಾತ್ಯತೀತ ನಿಲುವಿನ ರಾಜಕೀಯ ಪಕ್ಷಗಳು ಮತ್ತು ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಶಾಂತಿಯುತ ಪ್ರತಿಭಟನಾ ಸಭೆ ನಡೆಯಲಿದ್ದು.
ಪ್ರಜ್ಞಾವಂತ ನಾಗರಿಕ ಬಾಂಧವರೆಲ್ಲರೂ ಈ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯೊಂದಿಗೆ ಭಾಗವಹಿಸಿ- ಬೆಂಬಲಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿಯೂ
ಸುನ್ನೀ ನಾಯಕರು, ಕಾರ್ಯಕರ್ತರು ಹಾಗೂ ಸರ್ವ ಸದಸ್ಯರು ಈ ಸಭೆಯನ್ನು ಪ್ರಚಾರ ಪಡಿಸಿ ಯಶಸ್ವಿಗೊಳಿಸಬೇಕಾಗಿಯೂ
ಸುನ್ನೀ ಉಲಮಾ ಒಕ್ಕೂಟ , ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್,ಕರ್ನಾಟಕ ಮುಸ್ಲಿಂ ಜಮಾಅತ್ , ಸುನ್ನೀ ಅಧ್ಯಾಪಕ ಒಕ್ಕೂಟ, ಎಸ್ ವೈ ಎಸ್, ಎಸ್ಸೆಸ್ಸೆಫ್,ಹಾಗೂ ಎಸ್ ಎಮ್ ಎ, ಸಮಿತಿಗಳು ಕರೆ ನೀಡಿರುವುದಾಗಿ ಜಿಲ್ಲಾ ಸಂಚಾಲಕ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ