ರಿಯಾದ್: ಇರಾನಿನ ಉನ್ನತ ಸೇನಾಧಿಕಾರಿಯನ್ನು ವಧಿಸಿದ ಅಮೆರಿಕದ ಆಕ್ರಮಣದ ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಪ್ರತೀಕಾರ ಮತ್ತು ಯುದ್ಧವನ್ನು ತಪ್ಪಿಸಲು ಕೊಲ್ಲಿ ರಾಷ್ಟ್ರಗಳು ಬಯಸುತ್ತಿವೆ.
ಇರಾನ್ ಮೇಲಿನ ದಾಳಿಯು ಭಯೋತ್ಪಾದನೆಯ ಪರಿಣಾಮವಾಗಿದೆ ಎಂದು ಸೌದಿ ಅರೇಬಿಯಾ ಪ್ರತಿಕ್ರಿಯಿಸಿದ್ದು, 3,000 ಸೈನಿಕರನ್ನು ಕುವೈತ್ಗೆ ಕಳುಹಿಸಲು ಅಮೆರಿಕ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಇರಾನಿನ ಕುದ್ಸ್ ಫೋರ್ಸ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರನ್ನು ಯುಎಸ್ ಡ್ರೋನ್ ದಾಳಿಯ ಮೂಲಕ ಹತ್ಯೆಗೈದ ನಂತರ ಪಶ್ಚಿಮ ಏಷ್ಯಾ ತೀವ್ರ ಸಂಕಷ್ಟದಲ್ಲಿದೆ. ವಿಷಯಗಳನ್ನು ಯುದ್ಧಕ್ಕೆ ಹೋಗದಂತೆ ತಡೆಯುವ ರಾಜತಾಂತ್ರಿಕ ಕ್ರಮಗಳು ಈಗ ಪ್ರಗತಿಯಲ್ಲಿವೆ. ಹೆಚ್ಚಿನ ಕೊಲ್ಲಿ ರಾಷ್ಟ್ರಗಳು ಯುದ್ಧವು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಉಗ್ರವಾದ ಕುರಿತು ಸೌದಿಯು ನೀಡಿದ ಎಚ್ಚರಿಕೆಯನ್ನು ಅವಗಣಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎಂದ ಸೌದಿ ವಿದೇಶಾಂಗ ಸಚಿವ ಆದಿಲ್ ಅಲ್ ಝುಬೈರ್, ಈ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡಲು ವಿಶ್ವ ರಾಷ್ಟ್ರಗಳು ಮುಂದಾಗಬೇಕೆಂದು ಕರೆ ನೀಡಿದ್ದಾರೆ.
ಹೆಚ್ಚಿನ ಸಂಘರ್ಷಗಳಿಗೆ ಕಾರಣವಾಗದಂತೆ ವಿವೇಕದಿಂದ ಸಂಪೂರ್ಣ ರಾಜಕೀಯ ಪರಿಹಾರ ಕಂಡುಕೊಳ್ಳಬೇಕೆಂದು ಯುಎಇ ವಿದೇಶಾಂಗ ಸಚಿವ ಡಾ.ಅನ್ವರ್ ಗರ್ಗಾಶ್ ಹೇಳಿದರು. ಖತರ್ ಮತ್ತು ಕುವೈತ್ ಯುದ್ಧವು ಊಹಿಸಲಾಗದಷ್ಟು ಹೆಚ್ಚಿನ ಹಾನಿಯನ್ನುಂಟುಮಾಡಲಿದೆ ಎಂದು ಎಚ್ಚರಿಸಿದೆ. ಶಾಂತಿಗಾಗಿ ಅಂತರ್ರಾಷ್ಟ್ರೀಯ ಮಟ್ಟದ ಪ್ರಯತ್ನ ನಡೆಯಬೇಕು ಎಂದು ಬಹ್ರೈನ್ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ