ಕಲ್ಲಿಕೋಟೆ: ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಗೃಹ ಸಂಪರ್ಕ ಕಾರ್ಯಕ್ರಮಕ್ಕಾಗಿ ಬಿಜೆಪಿ ಹೊರತಂದ ಕರಪತ್ರವನ್ನು ಸ್ವೀಕರೀಸಿದ ನಾಸಿರ್ ಫೈಝಿ ಕೂಡತ್ತಾಯಿ ಅವರನ್ನು ಸಂಘಟನೆಯ ಎಲ್ಲಾ ಪದಾಧಿಕಾರಿ ಸ್ಥಾನಗಳಿಂದ ಅಮಾನತುಗೊಳಿಸಲಾಗಿದೆ ಎಂದು ಇ.ಕೆ.ವಿಭಾಗ ಸಮಸ್ತ ತಿಳಿಸಿದೆ.
ನಾಸರ್ ಫೈಝಿ ಸಮಸ್ತ ವಿರೋಧಿ ಚಟುವಟಿಕೆ ನಡೆಸಿರುವುದಾಗಿ ತನಿಖೆಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಸಮಸ್ತ ಕೇರಳ ಜಮ್ ಇಯ್ಯತುಲ್ ಉಲಮಾ ಇದರ ಅಧೀನ ಸಂಘಟನೆಗಳ ಅಧಿಕೃತ ಪದಾಧಿಕಾರಿ ಸ್ಥಾನಗಳಿಂದ ಅಮಾನತುಗೊಳಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಮನೆಯಲ್ಲಿ ಬಿಜೆಪಿ ನಾಯಕರನ್ನು ಬರಮಾಡಿಕೊಂಡು ಪೌರತ್ವ ಕಾನೂನು ಪರವಾದ ಕರಪತ್ರವನ್ನು ಸ್ವೀಕರಿಸಿದ ನಾಸಿರ್ ಫೈಝಿ ಅವರ ಕ್ರಮದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ನಿನ್ನೆಯಿಂದ ವ್ಯಾಪಕ ಟೀಕೆಗಳು ಕೇಳಿಬಂದಿದೆ. ಇದು ಸಮುದಾಯ ಮತ್ತು ಸಂಸ್ಥೆಗೆ ದ್ರೋಹವಾಗಿದೆ ಎಂಬುದು ಮುಖ್ಯ ಟೀಕೆಯಾಗಿದೆ. ಎಸ್ವೈಎಸ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಮಲುಲ್ಲೈಲಿ ತಂಙಳ್ ಮತ್ತು ಎಸ್ಕೆಎಸ್ಎಸ್ಎಫ್ ರಾಜ್ಯ ಕಾರ್ಯದರ್ಶಿ ಸತ್ತಾರ್ ಪಂದಲ್ಲೂರ್ ಅವರು ಬಹಿರಂಗವಾಗಿ ಟೀಕಿಸಿದ್ದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್