ಟೆಹರಾನ್: ಇರಾನ್ ಸೇನಾ ಕಮಾಂಡರ್ ಖಾಸಿಮ್ ಸುಲೇಮಾನಿ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮುಗಿಲು ಮಟ್ಟಿದೆ. ಒಂದು ರೀತಿಯಲ್ಲಿ ಯುದ್ಧದ ವಾತಾವರಣ ಮೂಡಿದೆ. ಈಗ ಉಭಯ ದೇಶಗಳ ನಡುವೆ ಸಂಧಾನಕ್ಕೆ ಜಾಗತಿಕ ಸಮುದಾಯ ಪ್ರಯತ್ನಿಸುತ್ತಿದೆ.
ಇರಾನ್-ಅಮೆರಿಕ ಬಿಕ್ಕಟ್ಟು ಮುಂದುವರಿದ ಬೆನ್ನಲ್ಲೇ ಸಂಯಮ ಕಾಪಾಡಿಕೊಳ್ಳುವಂತೆ ಭಾರತ ಮನವಿ ಮಾಡಿತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದೆ.ಈ ನಡುವೆ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಕುರಿತು ಹೊಸದಿಲ್ಲಿರುವ ಇರಾನ್ ರಾಯಭಾರಿ ಅಲಿ ಚೆಗನಿ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿ ಪ್ರಿಯ ರಾಷ್ಟ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ. ಜಾಗತಿಕ ಮಟ್ಟದಲ್ಲಿ ಶಾಂತಿ ಕಾಪಾಡಲು ಭಾರತದ ಪಾತ್ರ ಪ್ರಮುಖವಾಗಿದೆ. ಇರಾನ್ ದೇಶದ ಅತ್ಯಂತ ಪರಮಾಪ್ತ ದೇಶಗಳಲ್ಲಿ ಭಾರತ ಕೂಡ ಒಂದು ಎಂದರು.
ಒಂದು ವೇಳೆ ಅಮೆರಿಕ-ಇರಾನ್ ನಡುವೆ ಸಂಧಾನ ಏರ್ಪಟ್ಟು ಭಾರತ ಮಧ್ಯಸ್ಥಿಕೆ ವಹಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಅಲಿ ಚೆಗನಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ