ದಾರುಲ್ ಅಮಾನ್ ದಅವಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ದುರಸ್ತಿ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದರು.ದಾರುಲ್ ಅಮಾನ್ ಸಂಸ್ಥೆಯಿಂದ ಒಂದುವರೆ ಕಿಲೋಮೀಟರ್ ದೂರವಿರುವ ಪೆಜತಕಟ್ಟೆ ವರೆಗಿನ ರಸ್ತೆ ಹದಗೆಟ್ಟಿದ್ದು ವಾಹನ ಚಾಲಕರಿಗೆ ತುಂಬಾ ತೊಂದರೆ ಆಗುತ್ತಿತ್ತು.


ಸಂಸ್ಥೆಯಲ್ಲಿ ಪ್ರತಿ ತಿಂಗಳ ಪ್ರಥಮ ಶುಕ್ರವಾರ ಸ್ವಲಾತ್ ಕಾರ್ಯಕ್ರಮ ನಡೆಯುತ್ತಿದ್ದು ಇದರಿಂದ ವಿದೂರದಿಂದ ಆಗಮಿಸುವ ಪ್ರಯಾಣಿಕರು ತೊಂದರೆಗೊಳ ಗಾಗುತ್ತಿದ್ದಾರೆ. ಇದನ್ನು ಮನಗಂಡ ದಾರುಲ್ ಅಮಾನ್ ಸಂಸ್ಥೆಯು ಅಹ್ಮದುಲ್ ಕಬೀರ್ ರಿಫಾಯಿ(ರ) ಅನುಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳ ಸಹಕಾರದಿಂದ ಹೊಂಡ ಬಿದ್ದ ರಸ್ತೆಗೆ ಮಣ್ಣು ತುಂಬಿಸಿ ಬಹಳ ಅಚ್ಚುಕಟ್ಟಾಗಿ ಈ ಕಾರ್ಯವನ್ನು ನಿರ್ವಹಿಸಿದೆ. ಅಮಾನ್ ದಅವಾ ಕಾಲೇಜಿನ ಪ್ರಾಂಶುಪಾಲರಾದ ಅಬ್ದುಲ್ ನಾಸಿರ್ ಮುಈನಿ ಹಾಗೂ ಮೇನೆಜರಾದ ಆಶಿಕ್ ಮುಈನಿಯವರ ನಿರ್ದೇಶನದ ಮೇರೆಗೆ ಈ ಕೆಲಸ ಪೂರ್ಣಗೊಂಡಿತು.
24 ವಿದ್ಯಾರ್ಥಿಗಳಿಂದ ನಾಲ್ಕು ತಂಡಗಳಾಗಿ ವಿಭಾಗಿಸಿ ಮುಷರ್ರಫ್ ಹಿರೆ ಬಂಡಾಡಿ ಆಶಿಕ್ ಬೋಗಡಿ ಶಾಹಿದ್ ಮಂಚಿ ಸಂಶುದ್ದೀನ್ ಕುಪ್ಪೆಟ್ಟಿ ನಾಯಕತ್ವದಲ್ಲಿ ಕಾರ್ಯ ಯಶಸ್ವಿಯಾಗಿ ನಡೆಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ