ದುಬೈ: ತತ್ಕಾಲ್ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವ ಭಾರತೀಯ ಅನಿವಾಸಿಗಳಿಗೆ ಅದೇ ದಿವಸ ಪಾಸ್ಪೋರ್ಟ್ ನೀಡಲಾಗುವುದು ಎಂದು ದುಬೈ ಭಾರತೀಯ ದೂತಾವಾಸ ತಿಳಿಸಿದೆ.
ಕಾನ್ಸುಲೇಟ್ನಲ್ಲಿ ನಡೆಯುವ ಓಪನ್ ಹೌಸ್ ನಡೆಯುವ ಸ್ಥಳವನ್ನು ಪ್ರವಾಸಿ ಭಾರತೀಯ ಸಹಾಯ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಕಾನ್ಸುಲ್ ಜನರಲ್ ತಿಳಿಸಿದ್ದಾರೆ. ದುಬೈನ ಭಾರತೀಯ ದೂತಾವಾಸದಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದಲ್ಲಿ ಕಾನ್ಸುಲ್ ಜನರಲ್ ವಿಪುಲ್ ಈ ಘೋಷಣೆ ಮಾಡಿದ್ದಾರೆ.
ಪ್ರಸ್ತುತ ತತ್ಕಾಲ್ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಿದರೆ 24 ಗಂಟೆಗಳ ಒಳಗೆ ಪಾಸ್ಪೋರ್ಟ್ಗಳನ್ನು ನೀಡಲಾಗುತ್ತದೆ. ಬೆಳಿಗ್ಗೆ ಬಿಎಲ್ಎಸ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದರೆ ಸಂಜೆ ಪಾಸ್ಪೋರ್ಟ್ ಲಭಿಸಲಿದೆ. ಆನ್ಲೈನ್ ಅರ್ಜಿ ವ್ಯವಸ್ಥೆಯೊಂದಿಗೆ, ಸಾಮಾನ್ಯ ಅರ್ಜಿದಾರರಿಗೆ ಕೂಡ ಪಾಸ್ಪೋರ್ಟ್ಗಳನ್ನು ಮೂರು ದಿನಗಳಲ್ಲಿ ವಿತರಿಸಲು ಸಾಧ್ಯವಾಗುತ್ತಿದೆ. ದೂತಾವಾಸವು ದಿನಕ್ಕೆ ಸರಾಸರಿ 850 ಪಾಸ್ಪೋರ್ಟ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ.
ದುಬೈ ಕಾನ್ಸುಲೇಟ್ನಲ್ಲಿ ಆಯೋಜಿಸಲಾಗುತ್ತಿದ್ದ ಓಪನ್ ಹೌಸ್ನ ಸ್ಥಳವನ್ನು ಜುಮೈರಾದ ಟವರ್ಸ್ನಲ್ಲಿರುವ ಭಾರತೀಯ ಸಹಾಯ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು. ಪ್ರತೀ ತಿಂಗಳ ಕೊನೆಯ ಶುಕ್ರವಾರ ಓಪನ್ ಹೌಸ್ ನಡೆಸಲಾಗುತ್ತಿದ್ದು, ಪ್ರವಾಸಿ ಭಾರತೀಯ ಪ್ರಶಸ್ತಿ ಪುರಸ್ಕೃತ ಡಾ. ಆಝಾದ್ ಮೂಪನ್ ಸಹಿತ ಹಿರಿಯರು, ಆರು ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್