ದುಬೈ: ತತ್ಕಾಲ್ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವ ಭಾರತೀಯ ಅನಿವಾಸಿಗಳಿಗೆ ಅದೇ ದಿವಸ ಪಾಸ್ಪೋರ್ಟ್ ನೀಡಲಾಗುವುದು ಎಂದು ದುಬೈ ಭಾರತೀಯ ದೂತಾವಾಸ ತಿಳಿಸಿದೆ.
ಕಾನ್ಸುಲೇಟ್ನಲ್ಲಿ ನಡೆಯುವ ಓಪನ್ ಹೌಸ್ ನಡೆಯುವ ಸ್ಥಳವನ್ನು ಪ್ರವಾಸಿ ಭಾರತೀಯ ಸಹಾಯ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಕಾನ್ಸುಲ್ ಜನರಲ್ ತಿಳಿಸಿದ್ದಾರೆ. ದುಬೈನ ಭಾರತೀಯ ದೂತಾವಾಸದಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದಲ್ಲಿ ಕಾನ್ಸುಲ್ ಜನರಲ್ ವಿಪುಲ್ ಈ ಘೋಷಣೆ ಮಾಡಿದ್ದಾರೆ.
ಪ್ರಸ್ತುತ ತತ್ಕಾಲ್ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಿದರೆ 24 ಗಂಟೆಗಳ ಒಳಗೆ ಪಾಸ್ಪೋರ್ಟ್ಗಳನ್ನು ನೀಡಲಾಗುತ್ತದೆ. ಬೆಳಿಗ್ಗೆ ಬಿಎಲ್ಎಸ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದರೆ ಸಂಜೆ ಪಾಸ್ಪೋರ್ಟ್ ಲಭಿಸಲಿದೆ. ಆನ್ಲೈನ್ ಅರ್ಜಿ ವ್ಯವಸ್ಥೆಯೊಂದಿಗೆ, ಸಾಮಾನ್ಯ ಅರ್ಜಿದಾರರಿಗೆ ಕೂಡ ಪಾಸ್ಪೋರ್ಟ್ಗಳನ್ನು ಮೂರು ದಿನಗಳಲ್ಲಿ ವಿತರಿಸಲು ಸಾಧ್ಯವಾಗುತ್ತಿದೆ. ದೂತಾವಾಸವು ದಿನಕ್ಕೆ ಸರಾಸರಿ 850 ಪಾಸ್ಪೋರ್ಟ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ.
ದುಬೈ ಕಾನ್ಸುಲೇಟ್ನಲ್ಲಿ ಆಯೋಜಿಸಲಾಗುತ್ತಿದ್ದ ಓಪನ್ ಹೌಸ್ನ ಸ್ಥಳವನ್ನು ಜುಮೈರಾದ ಟವರ್ಸ್ನಲ್ಲಿರುವ ಭಾರತೀಯ ಸಹಾಯ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು. ಪ್ರತೀ ತಿಂಗಳ ಕೊನೆಯ ಶುಕ್ರವಾರ ಓಪನ್ ಹೌಸ್ ನಡೆಸಲಾಗುತ್ತಿದ್ದು, ಪ್ರವಾಸಿ ಭಾರತೀಯ ಪ್ರಶಸ್ತಿ ಪುರಸ್ಕೃತ ಡಾ. ಆಝಾದ್ ಮೂಪನ್ ಸಹಿತ ಹಿರಿಯರು, ಆರು ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ