ಕುವೈತ್ ಸಿಟಿ: ಕುವೈತ್ನಲ್ಲಿ ಗೃಹ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕಾನೂನುಗಳನ್ನು ಸುಧಾರಿಸಲಾಗುವುದು ಎಂದು ಮಾನವಶಕ್ತಿ ಪ್ರಾಧಿಕಾರ ಹೇಳಿದೆ. ಗೃಹ ಕಾರ್ಮಿಕರನ್ನು ಪೂರೈಸುವ ಏಜೆನ್ಸಿಗಳಿಗೆ ನಿಬಂಧನೆಗಳು ಹಾಗೂ ಹೆಚ್ಚುವರಿ ನಿಯಮಗಳೊಂದಿಗೆ ಸುಧಾರಣೆಗಳನ್ನು ಜಾರಿಗೆ ತರಲಾಗುವುದು ಎಂದು ಪ್ರಾಧಿಕಾರವು ಸುಳಿವು ನೀಡಿದೆ.
ಕುವೈತ್ನಲ್ಲಿ ಫಿಲಿಪೈನಿ ಪ್ರಜೆ ಕೊಲ್ಲಲ್ಪಟ್ಟ ಹಿನ್ನೆಲೆಯಲ್ಲಿ ಕಾನೂನು ಸುಧಾರಣೆಯ ಬಗ್ಗೆ ಮಾನವಶಕ್ತಿ ಪ್ರಾಧಿಕಾರ ಸುಳಿವು ನೀಡಿದೆ. ಗೃಹ ಕಾರ್ಮಿಕರನ್ನು ತಲುಪಿಸುವ ಏಜೆನ್ಸಿಗಳಿಗೆ ಹೆಚ್ಚಿನ ನಿಬಂಧನೆಗಳು ಮತ್ತು ನಿಯಮಗಳನ್ನು ಹೇರಲಾಗುತ್ತವೆ. ಕಾನೂನು ಉಲ್ಲಂಘಿಸುವ ಪ್ರಾಯೋಜಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಗೃಹ ಕಾರ್ಮಿಕರ ಹಕ್ಕುಗಳು, ವೇತನ ಪಾವತಿಸದಿರುವುದು ಮತ್ತು ಚಿತ್ರಹಿಂಸೆಗಳಿಗೆ ಸಂಬಂಧಿಸಿದ ದೂರುಗಳ ಇತ್ಯರ್ಥಕ್ಕೆ ಇದು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಓರ್ವ ಪ್ರಾಯೋಜಕನ ವಿರುದ್ಧ ಅನೇಕ ದೂರುಗಳು ದಾಖಲಾಗುತ್ತಿರುವ ಸನ್ನಿವೇಶವಿದೆ.
ಉದ್ಯೋಗಿಗಳಿಂದ ಒಂದಕ್ಕಿಂತ ಹೆಚ್ಚಿನ ದೂರುಗಳನ್ನು ಸ್ವೀಕರಿಸುವ ಪ್ರಾಯೋಜಕರು ಮತ್ತು ನೇಮಕಾತಿ ಕಚೇರಿಗಳನ್ನು ಕಪ್ಪುಪಟ್ಟಿಯಲ್ಲಿ ಸೇರಿಸಲಾಗುವುದು. 2016 ರ ಜುಲೈನಲ್ಲಿ ಕುವೈತ್ನಲ್ಲಿ ಜಾರಿಗೆ ಬಂದ ಹೊಸ ದೇಶೀಯ ಕಾರ್ಮಿಕ ಕಾನೂನು ಕಾರ್ಮಿಕರ ಪರವಾಗಿದೆ. ಆದಾಗ್ಯೂ ಶೋಷಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಬಂಧನೆಗಳೊಂದಿಗೆ ಕಾನೂನನ್ನು ಸುಧಾರಿಸಲು ಅಧಿಕಾರಿಗಳು ಈಗ ಯೋಜಿಸುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ