ವಿಟ್ಲ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಸಂವಿಧಾನಿಕ ಕಾಯ್ದೆಗಳಾದ NRC,CAA,NPR ವಿರುದ್ಧ, ಮದ್ರಸ ಅಧ್ಯಾಪಕರ ಒಕ್ಕೂಟ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ದಕ್ಷಿಣ ಕನ್ನಡ (ಈಸ್ಟ್) ಜಿಲ್ಲೆಯ ನಿರ್ದೇಶನದಂತೆ, ಇಲ್ಲಿಗೆ ಸಮೀಪದ ಪೆರುವಾಯಿ ಸಿರಾಜುಲ್ ಹುದಾ ಸೆಕೆಂಡರಿ ಮದ್ರಸ, ಮುಚ್ಚಿರಪದವು ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಮತ್ತು ಮದ್ರಸತುನ್ನೂರು ಓಣಿಬಾಗಿಲು ಇಲ್ಲಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ಕಾರ್ಯಕ್ರಮವು ಪೆರುವಾಯಿ ಮದ್ರಸ ಅಂಗಳದಲ್ಲಿ ನಡೆಯಿತು.

ಮಹ್’ಳರತುಲ್ ಬದ್ರಿಯ್ಯ ಮಜ್ಲಿಸ್ ಬಳಿಕ ರಾಷ್ಟ್ರಗೀತೆ ಹಾಡುವ ಮೂಲಕ ಆರಂಭಗೊಂಡ ಕಾರ್ಯಕ್ರಮದಲ್ಲಿ, ಖಂಡನಾ ಭಾಷಣ, ಪ್ರತಿಜ್ಞೆ ಬೋಧನೆ, ಭಿತ್ತಿಪತ್ರ ಪ್ರದರ್ಶನ, ಚಿಲ್ಡ್ರನ್ಸ್ ಚೈನ್ ಮೂಲಕ ಐಕ್ಯತೆ ಘೋಷಣೆ, ಭಾರತದ ಭೂಪಟ ರೂಪದಲ್ಲಿ ವಿದ್ಯಾರ್ಥಿ ದೇಶ ಪ್ರೇಮ ಅನಾವರಣ, ಹಾಗೂ ಸಂವಿಧಾನ ಮತ್ತು ಪೌರತ್ವ ವಿಷಯದಲ್ಲಿ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಇಲ್ಲಿನ ಖತೀಬ್ ಉಸ್ತಾದ್ ಮುಹಮ್ಮದ್ ಶರೀಫ್ ಮದನಿ, ಮುಖ್ಯ ಅಧ್ಯಾಪಕರಾದ ಎಂಕೆಎಂ ಕಾಮಿಲ್ ಸಖಾಫಿ ಕೊಡಂಗಾಯಿ, ಅಧ್ಯಾಪಕರಾದ ಮುಹಮ್ಮದ್ ಹಾರಿಸ್ ಹಿಮಮಿ, ಶರೀಫ್, ಜಮಾಅತ್ ಸಮಿತಿ ಉಪಾಧ್ಯಕ್ಷರಾದ ಅಬೂಬಕ್ಕರ್ ಸುನ್ನೀ ಫೈಝಿ, ಇಸ್ಮಾಯಿಲ್ ಕಾನ, ಅಬ್ದುಲ್ಲಾ ಕಾನ, ಮುಚ್ಚಿರದವು ಮದ್ರಸ ಸಮಿತಿ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಸ್ಮಾಯಿಲ್ ಶಾಫಿ, ಮುಹಮ್ಮದ್ ಶರೀಫ್ ಹಾಜಿ, ಅಬ್ಬಾಸ್ ಹಾಜಿ ಸಹಿತ ಊರಿನ ಪ್ರಮುಖ ನೇತಾರರು ಹಾಗೂ ಮದ್ರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್