ಮಂಗಳೂರು: ಜ.18 ರಂದು ಅಪರಾಹ್ನ ಬಲ್ಮಠ ಮೈದಾನದಲ್ಲಿ ಪಿಯುಸಿಎಲ್ ದ.ಕ. ಜಿಲ್ಲಾ ಸಮಿತಿ ಮತ್ತು ಎಸ್ಕೆಎಸ್ಸೆಸ್ಸೆಎಫ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಡೆಸಲು ಉದ್ದೇಶಿಸಿದ್ದ ಎನ್ ಆರ್ ಸಿ ಮತ್ತು ಸಿಎಎ ವಿರುದ್ಧ ಜಾಗೃತಿ ಸಮಾವೇಶಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಗುರುವಾರ ರಾತ್ರಿ ಪಿಯುಸಿಎಲ್ ಜಿಲ್ಲಾಧ್ಯಕ್ಷರಿಗೆ ಕದ್ರಿ ಠಾಣೆಯ ಇನ್ ಸ್ಪೆಕ್ಟರ್ ನೋಟಿಸ್ ಜಾರಿಗೊಳಿಸಿ, ಪ್ರತಿಭಟನಾ-ಜಾಗೃತಿ ಸಮಾವೇಶ ನಡೆಸುವ ಮೈದಾನದ ವಿವಾದವು ಸುಪ್ರೀಂ ಕೋರ್ಟ್ನಲ್ಲಿದೆ. ಅಲ್ಲಿ ಕಾರ್ಯಕ್ರಮ ನಡೆಸಲು ನ್ಯಾಯಾಲಯದ ಅನುಮತಿ ಬೇಕಾಗಿದೆ. ಅಲ್ಲದೆ ಆಸುಪಾಸಿನ ಜನರ, ಸಂಸ್ಥೆಗಳ ಆಕ್ಷೇಪಣೆ ಇರುವುದರಿಂದ ಕಾರ್ಯಕ್ರಮ ನಡೆಸಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ. ಹಾಗಾಗಿ ಜ.18ರಂದು ಬಲ್ಮಠ ಮೈದಾನದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾದಲ್ಲಿ ತಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಜ.18ರಂದು ಎರಡೂ ಸಂಘನೆಗಳು ಜಂಟಿಯಾಗಿ ಕಾರ್ಯಕ್ರಮ ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿತ್ತು. ಅದರಂತೆ ಗುರುವಾರ ಅಪರಾಹ್ನ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಸಂಘಟಕರು ಮಾಹಿತಿ ನೀಡಿದ್ದರು. ಅದಾದ ಕೆಲವೇ ಗಂಟೆಯೊಳಗೆ ಎಸ್ಕೆಎಸ್ಸೆಸ್ಸೆಎಫ್ ಸಂಘಟನೆಗೆ ನೋಟಿಸ್ ಜಾರಿಗೊಳಿಸಿದ ಪೊಲೀಸರು ಜ.18ರ ಕಾರ್ಯಕ್ರಮಕ್ಕೆ ತಮಗೆ ಅನುಮತಿ ನೀಡಿಲ್ಲ. ತಾವು ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದರೆ ಪರಿಶೀಲಿಸಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ ಎಸ್ಕೆಎಸ್ಸೆಸ್ಸೆಎಫ್ ಸಂಘಟನೆಯು ಜ.18ರ ಪ್ರತಿಭಟನೆಯಿಂದ ಹಿಂದೆ ಸರಿದಿತ್ತು. ಇದೀಗ ಪಿಯುಸಿಎಲ್ ಸಂಘಟನೆಗೂ ಪ್ರತಿಭಟನಾ-ಜಾಗೃತಿ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ ಕಾರಣ ಜ.18ರ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್