ಮಂಗಳೂರು,ಜ. 20; ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಸಜೀವ ಬಾಂಬ್ ನಿಷ್ಕ್ರಿಯಗೊಳಿಸಲು ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಕರಾವಳಿಗೆ ತೆರಳಿದ್ದರು. ಆದರೆ, ಪೊಲೀಸರು ಇದೀಗ ಸ್ಫೋಟಕವನ್ನು ನಿಷ್ಕ್ರಿಯಗೊಳಿಸುವ ಬದಲು ಸ್ಪೋಟಿಸುವ ಮೂಲಕ ಆತಂಕವನ್ನು ದೂರ ಮಾಡಿದ್ದಾರೆ.
ಈ ಸ್ಪೋಟಕವನ್ನು ಆರ್ಡಿಎಕ್ಸ್ ನಿಂದ ಸಿದ್ಧಪಡಿಸಿರುವ ಸುಧಾರಿತ ಸ್ಪೋಟಕ ಎಂದು ಊಹಿಸಲಾಗಿದ್ದು, ಇದನ್ನು ನಿಷ್ಕ್ರಿಯಗೊಳಿಸಲು ಮಂಗಳೂರಿನ ಕೆಂಜಾರ್ ಮೈದಾನಕ್ಕೆ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ನಿಷ್ಕ್ರಿಯಗೊಳಿಸುವ ಸಂದರ್ಭದಲ್ಲಿ ಬಾಂಬ್ ಸ್ಫೋಟಕ್ಕೊಳಗಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಪೊಲೀಸ್ ಇಲಾಖೆ ಅದನ್ನು ಸ್ಪೋಟಿಸಲು ಮುಂದಾಗಿತ್ತು.
ಕೆಂಜಾರೆ ಮೈದಾನದಲ್ಲಿ ಮರಳಿನ ಮೂಟೆಗಳ ನಡುವೆ ಬಾಂಬ್ ಇಟ್ಟು ಹೆಚ್ಚು ಅಪಾಯಕಾರಿಯಲ್ಲದ ರೀತಿಯಲ್ಲಿ ಸಂಜೆ 5.30ರ ಸುಮಾರಿಗೆ ಸ್ಪೋಟಕವನ್ನು ಸ್ಪೋಟಿಸಲಾಗಿದೆ. ಇದರಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ರಿಕ್ಷಾ ಮತ್ತು ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ:
ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಆಟೊ ರಿಕ್ಷಾದಲ್ಲಿ ಬಂದು ಸುಧಾರಿತ ಬಾಂಬ್ಗಳಿರುವ ಬ್ಯಾಗ್ ಅನ್ನು ಇಟ್ಟಿರುವ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅಧಿಕೃತವಾಗಿ ಆಟೊ ರಿಕ್ಷಾ ಮತ್ತು ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿಯು ಆಟೊದಲ್ಲಿ ಬಂದು ಬ್ಯಾಗ್ ಇಟ್ಟು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್