janadhvani

Kannada Online News Paper

ಜ.24(ಇಂದು) ಪಡಾರು ಮದಕದಲ್ಲಿ ಆಧ್ಯಾತ್ಮಿಕ ಮಜ್ಲಿಸ್

ಬಂಟ್ವಾಳ: ಕುಡ್ತಮುಗೇರು ಸಮೀಪದ ಪಡಾರು ಮದಕದಲ್ಲಿ ಮಹ್ಲರತುಲ್ ಬದ್ರಿಯಾ ಹಾಗೂ ಜಲಾಲಿಯ್ಯ ರಾತೀಬ್ ಮಜ್ಲಿಸ್ ಇಂದು ರಾತ್ರಿ ಅಸ್ಸಯ್ಯದ್ U.S ಶಿಹಾಬುದ್ದೀನ್ ತಂಙಳ್ ಮದಕ ರವರ ನೇತೃತ್ವದಲ್ಲಿ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸ್ಸಯ್ಯದ್ U.S ಅಬ್ದುಲ್ ಹಮೀದ್ ತಂಙಳ್ ಉದ್ಯಾವರ ರವರು ವಹಿಸಲಿದ್ದಾರೆ.ಕಾರ್ಯಕ್ರಮವನ್ನು ದಾರುಲ್ ಇರ್ಶಾದ್ ಮಾಣಿ ಇದರ ಶಿಲ್ಪಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದಾರೆ.

ಹಾಗೂ ಹಲವಾರು ಸಾದಾತುಗಳು,ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಕನ್ವಿನರ್ ಅಕ್ಬರ್ ಅಲಿ ಮದನಿ ಆಲಂಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com