ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ರವರ 71ನೇ ಗಣರಾಜ್ಯೋತ್ಸವ ದಿನದ ಸಂದೇಶ)
ಇಡೀ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಮತ್ತು ದೊಡ್ಡ ಸಂವಿಧಾನವೆಂದೇ ಖ್ಯಾತಿಯಾಗಿರುವ ಭಾರತೀಯ ಸಂವಿಧಾನದ ಪೀಠಿಕೆಯಂತೆ ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವನ್ನು ನೀಡಿದ್ದು,
ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆಯನ್ನು ಪ್ರೋತ್ಸಾಹಿಸಿದೆ. ಈ ಅಭಿವ್ಯಕ್ತಿ ಸ್ವಾತಂತ್ರ್ಯವು ಶತಮಾನಗಳಿಂದ, ಅಂದರೆ ಬ್ರಿಟಿಷರ, ಡಚ್ಚರ, ಪೋರ್ಚುಗೀಸರ ಕಾಲದಿಂದಲೂ ನಮ್ಮ ಪೂರ್ವಿಕರು ಕಾಯ್ದು ಕೊಂಡುಬಂದಿದೆ. ವೈವಿಧ್ಯತೆಯಲ್ಲಿ ಏಕತೆಯಿಂದ , ಹಲವಾರು ಧರ್ಮಗಳು, ಆಚಾರ ವಿಚಾರಗಳು ಎಲ್ಲರೂ ಒಂದಾಗಿ ಭಾರತೀಯರೆಂಬ ಸಂದೇಶದಡಿಯಲ್ಲಿ ಕೂಡಿ ಬಾಳಿ ಜೀವಿಸಿದ್ದರು.
ಜಾತಿ, ಮತ ಭೇದವಿಲ್ಲದೆ, ವರ್ಣ ವಿವೇಚನೆಯಿಲ್ಲದೆ ಶಾಂತಿಯಿಂದ ಶತಮಾನಗಳಿಂದ ಕಾಯ್ದುಕೊಂಡು ಬಂದಿದ್ದ ಜಾತ್ಯತೀತತೆಯನ್ನು ಅನುಭವಿಸಲು ಇನ್ನೂ ಸಹ ಸಾಧ್ಯವಾಗುವ ವಾತಾವರಣ ನಿರ್ಮಾಣಬೇಕು. ಗಾಂಧೀಜಿ, ನೆಹರು, ಅಬ್ದುಲ್ ಕಲಾಂ ಆಝಾದ್ ರವರ ಜೀವನ ಶೈಲಿ ಅವರುಗಳ ಮದ್ಯೆ ಇದ್ದಂತಹ ಒಗ್ಗಟ್ಟು, ಸೌಹಾರ್ದತೆಯನ್ನು ಮುಂದಕ್ಕೆ ಕೊಂಡೊಯ್ಯಲು ನಮಗೆ ಸಾಧ್ಯವಾಗಬೇಕು.
ಸಂವಿಧಾನ ನೀಡಿದ ಹಕ್ಕಿನಂತೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ, ಧರ್ಮ, ಜಾತಿ, ಲಿಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ವಿಲ್ಲದೇ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ ಪ್ರತೀಕವಾಗಿ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು ಕಲ್ಪಿಸಲು, ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ ನಾವು ಬದ್ಧರಾಗಬೇಕು.
ಹಿಂದಿನ ಹಲವು ಸರಕಾರಗಳು ಸಂವಿಧಾನಕ್ಕೆ ಕೆಲವು ಅವಶ್ಯಕ ತಿದ್ದುಪಡಿಗಳನ್ನು ತಂದಿದ್ದರೂ ಸಹ ಸಂವಿಧಾನದ ಪೀಠಿಕೆಯಲ್ಲಿ ನೀಡಿದ ಸಮಾನತೆಯ ಹಕ್ಕನ್ನು ಕಸಿದು ಕೊಳ್ಳುವ ಅಥವಾ ಧರ್ಮಾಧಾರಿತ ಹಕ್ಕನ್ನು ನೀಡುವ ಯಾವುದೇ ತಿದ್ದುಪಡಿ ಇಷ್ಟರವರಿಗೆ ಆಗಿರಲಿಲ್ಲ. ದಶಕ ಗಳಿಂದ ಭದ್ರತೆಗೊಂಡಿದ್ದ ಸಂವಿಧಾನವನ್ನು ಮಾರ್ಪಡಿಸಲು ಪ್ರಯತ್ನಿಸುತ್ತಿರುವ ಇಂದಿನ ಈ ಸನ್ನಿವೇಶದಲ್ಲಿ ಜಾತ್ಯತೀತ ಭಾರತವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಬದ್ಧರಾಗಬೇಕು. ಎಪ್ಪತ್ತು ವರ್ಷಗಳ ಹಿಂದೆ ಅಹಿಂಸೆಯ ಮೂಲಕ ನಮಗೆ ಸಿಕ್ಕಿದ ಆ ಸ್ವಾತಂತ್ರ್ಯದ ಸ್ಪೂರ್ತಿಯನ್ನು ನಾವು ಒಳಗೊಂಡು ಜೀವನ ರೂಪಿಸೋಣ. ಅಖಂಡ ಭಾರತದ ಭಾತೃತ್ವಕ್ಕೆ ಧಕ್ಕೆ ತರುವ ಎಲ್ಲಾ ಹೀನ ಶಕ್ತಿಗಳನ್ನು ಹಿಮ್ಮೆಟ್ಟಿಸೋಣ.
ಎಲ್ಲರಿಗೂ 71ನೇ ಗಣರಾಜ್ಯೋತ್ಸವ ಶುಭಾಶಯಗಳು
ಸುಭದ್ರ, ಶಾಂತಿಯ, ಸೌಹಾರ್ದತೆಯ ಜಾತ್ಯತೀತ ಭಾರತವು ವಿಶ್ವಾಂತ್ಯದ ವರೆಗೆ ನೆಲೆ ನಿಲ್ಲಲಿ..















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್