ನವದೆಹಲಿ,ಜ.29: ಮುಸ್ಲಿಮ್ ಮಹಿಳೆಯರ ಮಸೀದಿಯಲ್ಲಿನ ಪ್ರಾರ್ಥನೆ ಧಾರ್ಮಿಕ ವಿಷಯವಾಗಿದ್ದು, ಈ ವಿಚಾರದಲ್ಲಿ ನ್ಯಾಯಾಲಯದ ಹಸ್ತಕ್ಷೇಪ ಸೂಕ್ತವಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಬುಧವಾರ ಸುಪ್ರೀಂಕೋರ್ಟ್ಗೆ ಹೇಳಿದೆ.
ಮಹಿಳೆಯರಿಗೂ ಮಸೀದಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡುವಂತೆ ಕೋರಿ ಮುಸ್ಲಿಂ ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ಮುಸ್ಲಿಂ ಕಾನೂನು ಮಂಡಳಿ ಹೀಗೆ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿರುವ ಮುಸ್ಲಿಂ ಕಾನೂನು ಮಂಡಳಿ, ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಕ್ಕೆ ಅವಕಾಶ ಮುಕ್ತವಾಗಿದೆ. ಆದರೆ ಪುರುಷರಂತೆ ಅವರಿಗೆ ಅದು ಕಡ್ಡಾಯವೇನಲ್ಲ. ಪುರುಷರು ಮತ್ತು ಮಹಿಳೆಯರ ನಡುವಿನ ವ್ಯತ್ಯಾಸವೆಂದರೆ, ಮಹಿಳೆಯರಿಗೆ ಮಸೀದಿ ಬದಲಿಗೆ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ವಿಷಯದಲ್ಲಿ ನ್ಯಾಯಾಲಯ ಸಲಹೆ ನೀಡಬಹುದು. ಆದರೆ, ನಿರ್ದೇಶನ ನೀಡುವಂತಿಲ್ಲ ಎಂದು ಹೇಳಿದೆ.
ಇಸ್ಲಾಂ ಧರ್ಮವು ಮಹಿಳೆಯರು ಮಸೀದಿಯಲ್ಲಿ ಪ್ರಾರ್ಥನೆಗೆ ಸೇರ್ಪಡೆಗೊಳ್ಳುವುದನ್ನು ಕಡ್ಡಾಯಗೊಳಿಸಿಲ್ಲ ಅಥವಾ ಪುರುಷರಂತೆ ಮಹಿಳೆಯರು ಶುಕ್ರವಾರ ನಮಾಜ್ಅನ್ನು ಮಸೀದಿಯಲ್ಲಿ ಮಾಡುವುದು ಕಡ್ಡಾಯವಲ್ಲ.
ಏಕೆಂದರೆ ಇಸ್ಲಾಂ ಧರ್ಮದ ಸಿದ್ಧಾಂತಗಳ ಪ್ರಕಾರ, ಮಹಿಳೆಯರು ಮಸೀದಿ ಅಥವಾ ಮನೆಯಲ್ಲಿ ಆಕೆಯ ಆಯ್ಕೆಯಂತೆ ಪ್ರಾರ್ಥಿಸುವುದಕ್ಕಾಗಿ ಅವಕಾಶ ನೀಡಲಾಗಿದೆ ಎಂದು ಮುಸ್ಲಿಂ ಕಾನೂನು ಮಂಡಳಿ ತನ್ನ ಅಫಿಡವಿಟ್ನಲ್ಲಿ ತಿಳಿಸಿದೆ
ಮಸೀದಿಗೆ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ಅಸಂವಿಧಾನಿಕ ಮತ್ತು ಜೀವನ, ಸಮಾನತೆ, ಲಿಂಗ ನ್ಯಾಯದ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೇಳಿ ಯಾಸ್ಮಿಮ್ ಜುಬೇರ್, ಅಹ್ಮದ್ ಪಿರ್ಜಾದೆ ಮತ್ತು ಜುಬೇರ್ ಅಹ್ಮದ್ ಪಿರ್ಜಾದೆ ಎಂಬುವವರು ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದರು. ಅಲ್ಲದೇ, ಮಸೀದಿಗೆ ತೆರಳಿ ನಮಾಜ್ ಮಾಡಲು ಮಹಿಳೆಯರಿಗೆ ಅವಕಾಶ ನೀಡುವಂತೆ ಸರ್ಕಾರ ಮತ್ತು ಮುಸ್ಲಿಂ ಮಂಡಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ