ಬಿ.ಸಿ.ರೋಡ್: ಎಸ್ಸೆಸ್ಸೆಫ್ ರಾಜ್ಯ ಸಮಿತಿಯಿಂದ ಪ್ರತೀ ಜಿಲ್ಲಾ ಪ್ರಧಾನ ನಾಯಕರನ್ನು ಸೇರಿಸಿ ಮುಲಾಖಾತ್- 2020 ಎಂಬ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ಮದನಿಯವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಾಂಘಿಕ ಹಾಗೂ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಮುಕ್ತ ಚರ್ಚೆ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಯಾಕೂಬ್ ಸಅದಿ ನಾವೂರು ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ನಾಯಕರಾದ ಹಮೀದ್ ಬಜ್ಪೆ, ಸಾದಿಖ್ ಮಾಸ್ಟರ್ ಮಲೆಬೆಟ್ಟು, ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ಕಾರ್ಯದರ್ಶಿಗಳಾದ ಸಿರಾಜುದ್ದೀನ್ ಸಖಾಫಿ ಕನ್ಯಾನ, ಅಶ್ರಫ್ ರಝಾ ಅಂಜದಿ ಪಕ್ಷಿಕೆರೆ, ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಹುಸೈನ್ ಸಅದಿ ಹೊಸ್ಮಾರ್, ನವಾಝ್ ಭಟ್ಕಳ,
ರಾಜ್ಯ ನಾಯಕರಾದ ಲತೀಫ್ ಸಅದಿ ಶಿವಮೊಗ್ಗ, ಸಿದ್ದೀಖ್ ಸಖಾಫಿ ಭದ್ರಾವತಿ, ಶಾಫಿ ಸಅದಿ ಬೆಂಗಳೂರು, ಶರೀಫ್ ಹೊಸದೋಟ, ಮುಬಶ್ಶಿರ್ ಅಹ್ಸನಿ ಕೊಂಡಂಗೇರಿ, ಸಫ್ವಾನ್ ಚಿಕಮಗಳೂರು, ರಹೀಂ ಉಡುಪಿ, ಅಬ್ದುಲ್ ಹಕೀಂ ಬೆಂಗಳೂರು, ಎ.ಕೆ ರಝಾ ಅಂಜದಿ ಮೊದಲಾದವರು ಉಪಸ್ಥಿತರಿದ್ದರು.
ದ.ಕ., ಉಡುಪಿ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉ.ಕನ್ನಡ, ಧಾರವಾಡ, ಹಾವೇರಿ, ಗದಗ, ಕೊಡಗು, ಮುಂತಾದ ಜಿಲ್ಲೆಗಳ ನಾಯಕರು ಭಾಗವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು ಸ್ವಾಗತಿಸಿದರು. ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಧನ್ಯವಾದಗೈದರು.