janadhvani

Kannada Online News Paper

ಎನ್‌ಆರ್‌ಸಿ ಜಾರಿಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ-ಗೃಹ ಸಚಿವಾಲಯ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇಂದು ಸಂಸತ್ತಿನಲ್ಲಿಯೂ ಕೂಡ ಇದು ಗದ್ದಲಕ್ಕೆ ಕಾರಣವಾಗಿದೆ. ಲೋಕಸಭೆಯಲ್ಲಿ ಇಂದು ಮತ್ತೆ ಕಾಂಗ್ರೆಸ್ ಸಂಸದರು NRC ಹಾಗೂ CAAಗೆ ಸಂಬಂಧಿಸಿದಂತೆ ಗದ್ದಲ ಸೃಷ್ಟಿಸಿದ್ದಾರೆ. ಈ ವೇಳೆ ಮಾತನಾಡಿರುವ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ್ ರಾಯ್, ‘ಸರ್ಕಾರ NRC ಜಾರಿಗೆ ತರಲು ಯಾವುದೇ ಪ್ಲಾನ್ ಮಾಡಿಲ್ಲ’ ಎಂದು ಹೇಳಿದ್ದಾರೆ. ಸದ್ಯಕ್ಕೆ ದೇಶಾದ್ಯಂತ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಜಾರಿಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಕೇಂದ್ರ ಗೃಹ ಸಚಿವಾಲಯವು ಲೋಕಸಭೆಯಲ್ಲಿ ಮಂಗಳವಾರ ಲಿಖಿತವಾಗಿ ಪ್ರಕಟಿಸಿದೆ.

ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕೇಂದ್ರವು ಚರ್ಚಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಉನ್ನತ ನಾಯಕರು ಹಲವಾರು ಸಂದರ್ಭಗಳಲ್ಲಿ ಹೇಳಿದ್ದಾರೆ. ಸ್ಪಷ್ಟೀಕರಣದ ಹೊರತಾಗಿಯೂ, ಪಶ್ಚಿಮ ಬಂಗಾಳ ಬಿಜೆಪಿ ಈ ವರ್ಷದ ಆರಂಭದಲ್ಲಿ, ಸಿಎಎ ಅನುಷ್ಠಾನಗೊಳಿಸಿದ ನಂತರ, ನಾಗರಿಕರ ನೋಂದಣಿ ಅಂತಿಮ ಹಂತದಲ್ಲಿದೆ ಎಂದು ಹೇಳಲಾದ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಿತ್ತು. .

ವಿಪಕ್ಷಗಳ ಪ್ರಶ್ನೆಗೆ ಗೃಹ ಸಹಾಯಕ ಸಚಿವ ನಿತ್ಯಾನಂದ್ ರಾಯ್ ಅವರು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ” ರಾಷ್ಟ್ರಮಟ್ಟದಲ್ಲಿ ನಾಗರಿಕರ ನೋಂದಣಿ (ಎನ್‌ಆರ್‌ಸಿ) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ” ಎಂದರು.

ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೆಚ್ಚಿನ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆ (ಸಿಎಎ), ಎನ್‌ಆರ್‌ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕುರಿತು ಚರ್ಚೆ ಮತ್ತು ಉತ್ತರಗಳನ್ನು ಕೋರಿ ನೋಟಿಸ್ ನೀಡಿತ್ತು.

ಡಿಎಂಕೆ, ಸಿಪಿಐ, ಸಿಪಿಐ (ಎಂ), ಎನ್‌ಸಿಪಿ, ಆರ್‌ಜೆಡಿ, ಟಿಎಂಸಿ, ಎಸ್‌ಪಿ ಮತ್ತು ಬಿಎಸ್‌ಪಿ ಸೇರಿದಂತೆ ಬಹುತೇಕ ಎಲ್ಲ ವಿರೋಧ ಪಕ್ಷಗಳು ಎಲ್ಲಾ ವ್ಯವಹಾರಗಳನ್ನು ಮುಂದೂಡಲು ಮತ್ತು ಚರ್ಚಿಸಲು ನಿಯಮ 267 ರ ಅಡಿಯಲ್ಲಿ ನೋಟಿಸ್ ನೀಡಿವೆ ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಝಾದ್ ಹೇಳಿದ್ದಾರೆ.

“ಕಳೆದ ಎರಡು ತಿಂಗಳುಗಳಿಂದ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನದಂದ ಇಡೀ ದೇಶದ ಬೀದಿಗಳಿದ್ದಾರೆ. ಎನ್‌ಪಿಆರ್ ಅನ್ನು ಮೊದಲೇ ಮಾಡಲಾಗಿತ್ತು, ಆದರೆ ಪ್ರಶ್ನೆಗಳು ಸರಳವಾಗಿದ್ದವು. ಆದರೆ ಈ ಸರ್ಕಾರದ ನ್‌ಪಿಆರ್‌ನಲ್ಲಿ ಇತರ ವಿವರಗಳು ತಂದೆಯ ಹುಟ್ಟಿದ ದಿನಾಂಕವನ್ನು ಕೇಳಲಾಗಿದೆ. “

“ಸರ್ಕಾರ ಇದನ್ನು ಹಿಂದೂ-ಮುಸ್ಲಿಂ ಸಮಸ್ಯೆಯೆಂದು ಪ್ರತಿನಿಧಿಸುತ್ತದೆ. ಹಿಂದೂ-ಮುಸ್ಲಿಂ ಸಮಸ್ಯೆ ಇಲ್ಲ ಎಂದು ನಾವೆಲ್ಲರೂ ಭಾವಿಸಬೇಕಾಗಿದೆ” ಎಂದು ಮಾಜಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಹೇಳಿದರು.

ತನ್ನ ಭರವಸೆಗಳನ್ನು ಪೂರೈಸುವಲ್ಲಿ ವಿಫಲವಾದ ಕಾರಣ ಗಮನವನ್ನು ಉದ್ದೇಶಪೂರ್ವಕವಾಗಿ ಬೇರೆಡೆಗೆ ತಿರುಗಿಸಲು ಸರ್ಕಾರ ಈ ಎಲ್ಲವನ್ನು ಮಾಡುತ್ತಿದೆ ಎಂದು ಅವರು ಅಪಾದಿಸಿದರು,

” ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಸಿಎಎಯನ್ನು ಮೊದಲು ಮತ್ತು ನಂತರ ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೊಳಿಸಲಾಗುವುದು ಎಂದು ಪದೇ ಪದೇ ಹೇಳಿದ್ದರು.

ಈ ಹೇಳಿಕೆಗಳು ದೇಶಾದ್ಯಂತ ಮತ್ತು ವಿವಿಧ ರಾಜ್ಯಗಳ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ದಿಲ್ಲಿ ಮತ್ತು ದೇಶದ ಇತರ ಭಾಗಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳು ಮುಂದುವರಿದಿದೆ.

2024 ರ ವೇಳೆಗೆ ಮೋದಿ ಸರ್ಕಾರ ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ತರಲಿದೆ ಎಂದು ಅಮಿತ್ ಶಾ ಪದೇ ಪದೇ ಹೇಳಿದ್ದರೆ, ಪಿಎಂ ನರೇಂದ್ರ ಮೋದಿ ಅವರು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರತಿಪಕ್ಷಗಳು ಹರಡುತ್ತಿರುವ ಸುಳ್ಳು ಎಂದು ಹೇಳಿದ್ದರು.

ಅತ್ತ ಇನ್ನೊಂದೆಡೆ ರಾಜ್ಯಸಭೆಯಲ್ಲಿಯೂ ಕೂಡ ಪ್ರತಿಪಕ್ಷ ಮುಖಂಡರು NRC ಹಾಗೂ CAA ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

error: Content is protected !! Not allowed copy content from janadhvani.com