ಕೋಲಾರ: ರಾಹುಲ್ ಬಗ್ಗೆ ಮೋದಿ ಟ್ಯೂಬ್ ಲೈಟ್ ಎಂಬ ವ್ಯಂಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಮೋದಿಯವರು ಸಂಸತ್ತಿನಲ್ಲಿ ಏನು ಉತ್ತರ ಕೊಟ್ಟಿದ್ದಾರೆ. ರೈತರಿಗೆ ದುಪ್ಪಟ್ಟು ಮಾಡ್ತೇನೆ ಅಂದಿದ್ರು. 15 ಲಕ್ಷ ಅಕೌಂಟ್ಗೆ ಹಾಕ್ತೇನೆ ಅಂತ ಹೇಳಿದ್ರು. ಇದ್ರ ಬಗ್ಗೆ ಪ್ರಧಾನಿಯವರು ಮಾತನಾಡಲಿ. ಅದು ಬಿಟ್ಟು ರಾಹುಲ್ ಬಗ್ಗೆ ವೈಯುಕ್ತಿಕ ಹೇಳಿಕೆ ಕೊಡೋದು ಸರಿಯಲ್ಲ. ಟ್ಯೂಬ್ ಲೈಟ್ ಚೆನ್ನಾಗಾದರೂ ಬೆಳಗುತ್ತೆ. ಮೋದಿಯವರು ಜಿರೋ ಲೈಟ್ ಇದ್ದಂತೆ. ಅಂದ್ರೆ ಲೈಟ್ ಇರುತ್ತೆ, ಬೆಳಕು ಮಾತ್ರ ಇರಲ್ಲ. ನಾನು ಸಂಸತ್ತಿನಲ್ಲಿ ಭಾಗವಹಿಸಿದ್ರೆ ಇದನ್ನೇ ಹೇಳ್ತಿದ್ದೆ ಎಂದು ಮೋದಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಹೈದ್ರಾಬಾದ್ ಕರ್ನಾಟಕವನ್ನ ಸರ್ಕಾರ ಅಭಿವೃದ್ಧಿಪಡಿಸುವ ವಿಚಾರವಾಗಿ ಮಾತನಾಡಿದ್ದು, ಅಸಮಾಧಾನ ಹೊರಹಾಕಿದ್ದಾರೆ.ಹೈದ್ರಬಾದ್ ಕರ್ನಾಟಕಕ್ಕೆ ಕಲ್ಯಾಣ ಅಂತ ಮಾಡಿದ್ದಾರೆ. ನೊಡೋಣ ಅದೆಷ್ಟು ಕಲ್ಯಾಣ ಮಾಡ್ತಾರೆ ಅಂತ. ಹಣ ಬಿಡುಗಡೆಯನ್ನೇ ಮಾಡೋದಿಲ್ಲ. ಇನ್ನ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹೇಗೆ ಸಾಧ್ಯ..? ಕೆಲವರು ಕೇಳುತ್ತಿದ್ದಂತೆ ಹಣವನ್ನ ಬಿಡುಗಡೆ ಮಾಡ್ತಾರೆ. ಕೆಲವರು ಅನುದಾನ ಕೇಳಿದ್ರೂ ಸರ್ಕಾರ ನೀಡ್ತಿಲ್ಲ. ಎಲ್ಲವೂ ಸಿಎಂ ಅಪ್ರೂವಲ್ ಆಗಬೇಕು. ಇನ್ನು ಬಜೆಟ್ ಯಾಕೆ ಮಾಡ್ತೀರಾ..? ಎಂದು ಆಕ್ರೋಶ ಹೊರಹಾಕಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ