ದಮ್ಮಾಂ : ಕೆಸಿಎಫ್(ಕರ್ನಾಟಕ ಕಲ್ಚರಲ್ ಫೌಂಡೇಶನ್) ಅಲ್ ಹಸ್ಸ ಸೆಕ್ಟರ್ ವತಿಯಿಂದ ಕೆಸಿಎಫ್ ಅಲ್ ಹಸ್ಸ ಸೆಕ್ಟರ್ ಅಧ್ಯಕ್ಷ ಹಬೀಬ್ ಉಸ್ತಾದರ ಅಧ್ಯಕ್ಷತೆಯಲ್ಲಿ ಹಫೂಫ್ ಸಅದಿಯಾ ಹಾಲ್ ನಲ್ಲಿ ಅದ್ದೂರಿಯಾಗಿ ‘ ಕೆಸಿಎಫ್ ಫೌಂಡೇಶನ್ ಡೇ’ ಆಚರಿಸಲಾಯಿತು.


ಉಸ್ತಾದ್ ಇಬ್ರಾಹಿಂ ಸಅದಿ,ಅಹ್ಮದ್ ಸಅದಿ,ನೌಶಾದ್ ಅಮಾನಿ ಮತ್ತು ಇಕ್ಬಾಲ್ ಜಿ.ಕೆ.ಗುಲ್ವಾಡಿ ಆಶಂಸ ಭಾಷಣ ಮಾಡಿದರು.
ಕೆಸಿಎಫ್ ದಾಯಿ ಉಮರ್ ಫಾರೂಖ್ ಬಅಹ್ಸನಿ ಮುಖ್ಯ ಭಾಷಣ ಮಾಡಿ,ಆಧ್ಯಾತ್ಮಿಕತೆಯಿಂದ ಮಾತ್ರ ಪಾರಾರ್ತಿಕ ವಿಜಯ ಸಾಧ್ಯ. ಜಗತ್ತಿನಲ್ಲಿಂದು ಎಲ್ಲವೂ ಇದೆ ಆಧ್ಯಾತ್ಮಿಕತೆಗೆ ಮಾತ್ರ ಬರ ಹಿಡಿದಿದೆ ಎಂದರು.
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಕೆಸಿಎಫ್ ಕಾರ್ಯಕರ್ತರು ಮಾಡಿದ ರಿಲೀಫ್, ಹಜ್ಜ್ ಸ್ವಯಂ ಸೇವಕರು ,ವರದಕ್ಷಿಣೆ ರಹಿತ ವಿವಾಹ ಮತ್ತು ಇಸ್ಲಾಮೀ ಆಶಯ, ಶಿಷ್ಟಾಚಾರದಲ್ಲಿ ಹಿಂದುಳಿದ ಉತ್ತರ ಕರ್ನಾಟಕದಲ್ಲಿ ಮಾಡಿದ ಪರಿವರ್ತನೆ ಮುಂತಾದ ಅದ್ವಿತೀಯ ಇಹ್ಸಾನ್ ಸೇವೆಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ವೇದಿಕೆಯಲ್ಲಿ ಕೆಸಿಎಫ್ ಅಲ್ ಹಸ್ಸ ಸೆಕ್ಟರ್ ಅಧ್ಯಕ್ಷ ಹಬೀಬ್ ಉಸ್ತಾದ್ ಮರ್ದಲಾ,ಅಹ್ಮದ್ ಸಅದಿ, ಸಮಿ ಎಂಬಸ್ಸಿ ಮಾಲಕ, ಹಾಜಿ ಅಬ್ದುರ್ರಹ್ಮಾನ್ ಉಚ್ಚಿಲ, ನೌಶಾದ್ ಅಮಾನಿ,ಉಮರ್ ಪಾರೂಖ್ ಬಅಹ್ಸನಿ,ಇಬ್ರಾಹಿಂ ಸಅದಿ ಮತ್ತು
ಶಂಸುದ್ದೀನ್ ಕೊಡಗು, ಹುಫುಫ್ ಯೂನಿಟ್ ಅಧ್ಯಕ್ಷ ಅಬೂಬಕ್ಕರ್ ಕಿಲ್ಲೂರ್ ,ಮುಬಾರಾಜ್ ಯೂನಿಟ್ ಅಧ್ಯಕ್ಷ ಅಬ್ದುಲ್ಲಾ ಪುಲಾಬೆ ಉಪಸ್ಥಿತರಿದ್ದರು.
ಸಮದ್ ಬೇಂಗಿಲ ಕಿರಾತ್ ಪಠಿಸಿದರು
ಇಸ್ಹಾಕ್ ಸಿ ಐ ಫಜೀರ್ ಸ್ವಾಗತಿಸಿ,ಪ್ರ.ಕಾರ್ಯದರ್ಶಿ ಹಾರೀಸ್ ಕಾಜೂರು ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ