ಕಾರ್ಕಳ,ಫೆ.15: ಮೈಸೂರಿನಿಂದ ಬರುತ್ತಿದ್ದ ಬಸ್ಸೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉಡುಪಿಯ ಕಾರ್ಕಳದ ಮುಳ್ನೂರ್ ಘಾಟ್ ನಲ್ಲಿ ನಡೆದಿದೆ.
ಅಪಘಾತಕ್ಕೀಡಾದ ಬಸ್ ಪ್ರವಾಸಿ ಬಸ್ ಎಂದು ಹೇಳಲಾಗಿದೆ. ಮುಳ್ನೂರ್ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಂಡೆಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಬಸ್ ನಲ್ಲಿದ್ದ 7 ಪ್ರವಾಸಿಗಳು ಸ್ಥಳದಲ್ಲೇ ಮೃತಪಟ್ಟಿದ್ದು,ನಾಲ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನಿಂದ ಖಾಸಗಿ ಸಂಸ್ಥೆಯೊಂದು ಪ್ರವಾಸ ಹಮ್ಮಿಕೊಂಡಿತ್ತು ಎನ್ನಲಾಗಿದೆ. ಪ್ರವಾಸದ ಸಂಭ್ರಮದಲ್ಲಿದ್ದವರು ಮುಳ್ನೂರು ಘಾಟ್ ನಲ್ಲಿ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗಳು ಗಾಯಗೊಂಡಿದ್ದಾರೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ.















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ
ನಮ್ಮ ನಾಡ ಒಕ್ಕೂಟ, ಟೀಮ್ ಮಲೆನಾಡು ಹ್ಯೂಮನಿಟೇರಿಯನ್ ಟ್ರಸ್ಟ್- ಸಹಾಯಧನ ಹಸ್ತಾಂತರ