ಶಾರ್ಜಾ: ಶಾರ್ಜಾ ಆಡಳಿತಾಧಿಕಾರಿ ಶೈಖ್ ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿಯವರ ಅಧೀನದಲ್ಲಿ ನಡೆಸಲಾಗುವ ಇಸ್ಲಾಮಿಕ್ ಉಲಮಾ ಅಧ್ಯಯನ ಕಾನ್ಪೆರೆನ್ಸ್ಗೆ ನೇತೃತ್ವ ನೀಡಲು ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದರನ್ನು ಆಮಂತ್ರಿಸಲಾಗಿದೆ.
ಶಾರ್ಜಾದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಲ್ಲಿನ ಇಮಾಮರುಗಳು, ಮುಫ್ತಿಗಳು ಖತೀಬ್ಗಳು, ಉನ್ನತ ಸರಕಾರಿ ಉದ್ಯೋಗಸ್ಥರು ಭಾಗವಹಿಸಲಿದ್ದಾರೆ.

ಫೆಬ್ರವರಿ 17, 18, 19 ಈ ಮೂರು ದಿನಗಳಲ್ಲಿ “ಸಿಹಾ ಹುಸಿತ್ತ” ಹದೀಸ್ ಗ್ರಂಥಗಳ ಅಧ್ಯಯನ ತರಗತಿ ನಡೆಯಲಿದ್ದು , ಫೆಬ್ರವರಿ 18 ರಂದು ಶೈಖುನಾ ಎ.ಪಿ ಉಸ್ತಾದರು ಸುನನು ನಸಾಯೀ, ಸುನನು ತಿರ್ಮುದ್ಸೀ ಬಗ್ಗೆ ತರಗತಿ ನಡೆಸಲಿದ್ದಾರೆ.
ನಿರಂತರ ಆರು ದಶಕಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ಬುಖಾರಿ ಕ್ಲಾಸ್ ನಡೆಸುತ್ತಿರುವ ಶೈಖುನಾ ಎ.ಪಿ ಉಸ್ತಾದರ ಸಾಧನೆ ಮನಗಂಡು ದುಬೈ ಸರಕಾರ ಅವರಿಗೆ ಈ ಮಹತ್ವದ ವೇದಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು